ಪುತ್ತೂರು ಕಾಂಗ್ರೆಸ್‌ ಅಭ್ಯರ್ಥಿಯಾಗಿ ಅಶೋಕ್‌ ರೈ ನಾಮಪತ್ರ ಸಲ್ಲಿಕೆ

0

ಪುತ್ತೂರು :ದರ್ಬೆ ವೃತ್ತದ ಬಳಿಯಿಂದ ಕಾರ್ಯಕರ್ತರು, ಅಭಿಮಾನಿಗಳು ಮತ್ತು ಹಿತೈಷಿಗಳೊಂದಿಗೆ ಮೆರವಣಿಗೆಯಲ್ಲಿ ಸಾಗಿ ಬಂದ ಪುತ್ತೂರು ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಅಶೋಕ್‌ ಕುಮಾರ್‌ ರೈ ಚುನಾವಣಾಧಿಕಾರಿ ಗಿರೀಶ್‌ ನಂದನ್‌ ಅವರಿಗೆ ನಾಮಪತ್ರ ಸಲ್ಲಿಸಿದರು.

ದರ್ಬೆ ವೃತ್ತದಲ್ಲಿ ಶ್ರೀ ಮಹಾಲಿಂಗೇಶ್ವರ ದೇವರ ಕಟ್ಟೆಗೆ ಹಾರಾರ್ಪಣೆ ಮಾಡಿ ತೆಂಗಿನಕಾಯಿ ಒಡೆಯುವ ಮೂಲಕ ಮೆರವಣಿಗೆಗೆ ಚಾಲನೆ ನೀಡಲಾಯಿತು. ಕೊಂಬು, ಕಹಳೆ, ಕಲ್ಲಡ್ಕ ಗೊಂಬೆ, ನಾಸಿಕ್‌ ಬ್ಯಾಂಡ್‌, ಹುಲಿವೇಷ ಮೆರವಣಿಗೆಗೆ ಮೆರುಗು ನೀಡಿತು.

ಮೆರವಣಿಗೆಯಲ್ಲಿ ಮಾಜಿ ಶಾಸಕಿ ಶಕುಂತಲಾ ಶೆಟ್ಟಿ, ಪುತ್ತೂರು ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಎಮ್‌ ಬಿ ವಿಶ್ವನಾಥ್‌ ರೈ, ನಗರ ಕಾಂಗ್ರೆಸ್‌ ಅಧ್ಯಕ್ಷ ಮಹಮ್ಮದ್‌ ಅಲಿ, ವಿಟ್ಲ ಉಪ್ಪಿನಂಗಡಿ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಕೆ ಬಿ ರಾಜರಾಮ್‌ , ಕೆಪಿಸಿಸಿ ಸಂಯೋಜಕ ಕಾವು ಹೇಮನಾಥ ಶೆಟ್ಟಿ, ಸೇರಿದಂತೆ ಹಲವು ಮುಖಂಡರು ಹೆಜ್ಜೆ ಹಾಕಿ, ನಾಮಪತ್ರ ಸಲ್ಲಿಕೆಯಲ್ಲಿ ಭಾಗವಹಿಸಿದರು.

LEAVE A REPLY

Please enter your comment!
Please enter your name here