ತಪ್ಪಿದ ಮುಹೂರ್ತ- ಜೆಡಿಎಸ್‌ ಅಭ್ಯರ್ಥಿಯಿಂದ ಎ.20ರಂದು ನಾಮಪತ್ರ ಸಲ್ಲಿಕೆ

0

ಪುತ್ತೂರು : ಪುತ್ತೂರು ವಿಧಾನಸಭಾ ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿಯಾಗಿ ದಿವ್ಯಪ್ರಭಾ ಚಿಲ್ತಡ್ಕ ನಾಳೆ(ಏ.20) ಬೆಳಿಗ್ಗೆ11.01ಗಂಟೆಗೆ ನಾಮಪತ್ರ ಸಲ್ಲಿಸಲಿದ್ದಾರೆ. ಇಂದು ನಾಮಪತ್ರ ಸಲ್ಲಿಸಲು ಸಮಯ ನಿಗದಿಯಾಗಿತ್ತಾದರು ಕಾರಣಾಂತರಗಳಿಂದ ನಾಳೆಗೆ ಮುಂದೂಡಲಾಗಿದೆ.

ನಾಮಪತ್ರ ಸಲ್ಲಿಸಲು ಬೆಂಬಲಿಗರೊಂದಿಗೆ ಮೆರವಣಿಗೆಯಲ್ಲಿ ಚುನಾವಣಾ ಅಧಿಕಾರಿ ಕಛೇರಿಗೆ ಬಂದರೂ ನಿಗದಿತ ಸಮಯದ ಮುಹೂರ್ತ ಮೀರಿದ ಹಿನ್ನೆಲೆಯಲ್ಲಿ ನಾಮಪತ್ರ ಸಲ್ಲಿಕೆ ಕಾರ್ಯಕ್ರಮವನ್ನು ನಾಳೆಗೆ ಮುಂದೂಡಲಾಗಿದೆ.ಎ.20 ಅಮವಾಸ್ಯೆ ಆಗಿದ್ದರೂ ಉತ್ತಮ ಶುಭ ಮುಹೂರ್ತದಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಜೆಡಿಎಸ್‌ ಮೂಲಗಳು ತಿಳಿಸಿವೆ.

LEAVE A REPLY

Please enter your comment!
Please enter your name here