ಪುತ್ತೂರು ಜೆ ಡಿ ಎಸ್‌ ಅಭ್ಯರ್ಥಿ ದಿವ್ಯಪ್ರಭಾ ಚಿಲ್ತಡ್ಕ ನಾಮಪತ್ರ ಸಲ್ಲಿಕೆ

0

ಪುತ್ತೂರು: ಕರ್ನಾಟಕ ವಿಧಾನ ಸಭಾ ಚುನಾವಣೆಗೆ ಜೆಡಿಎಸ್(ಜಾತ್ಯತೀತ ಜನತಾದಳದ) ಅಭ್ಯರ್ಥಿಯಾಗಿ ದಿವ್ಯಪ್ರಭಾ ಗೌಡ ಚಿಲ್ತಡ್ಕರವರು ಎ.20ರಂದು ಚುನಾವಣಾಧಿಕಾರಿಯಾಗಿರುವ ಗಿರೀಶ್ ನಂದನ್‌ರವರಿಗೆ ನಾಮಪತ್ರ ಸಲ್ಲಿಸಿದರು.


ಎ.19ರಂದು ಪುತ್ತೂರಿನಲ್ಲಿ ರೋಡ್ ಶೋ ನಡೆಸಿ ಮತಯಾಚಿಸಿದ್ದ ದಿವ್ಯಪ್ರಭಾರವರು ಎ.20ರಂದು ನಾಮಪತ್ರ ಸಲ್ಲಿಸಿದರು. ಜೆಡಿಎಸ್ ಪಕ್ಷದ ನಿಕಟಪೂರ್ವ ಅಧ್ಯಕ್ಷ ಐ.ಸಿ ಕೈಲಾಸ್, ಮಹಿಳಾ ಘಟಕದ ಅಧ್ಯಕ್ಷೆ ಪದ್ಮಮಣಿಯನ್, ಹಿಂದುಳಿದ ವರ್ಗಗಳ ಜಿಲ್ಲಾಧ್ಯಕ್ಷ ಪ್ರಭಾಕರ ಸಾಲ್ಯಾನ್ ಜೊಹರಾ ನಿಸಾರ್ ಹಾಗೂ ರಾಜ್ಯ ನಾಯಕ ಇಬ್ರಾಹಿಂ ಗೋಳಿಕಟ್ಟೆ ನಾಮಪತ್ರ ಸಲ್ಲಿಸುವ ವೇಳೆ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here