ಪುತ್ತೂರು ಜಾತ್ರೆ ಸಂಪನ್ನ – ಸಂಪ್ರೋಕ್ಷಣೆ, ಮಂತ್ರಾಕ್ಷತೆ ವಿತರಣೆ

0

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜಾತ್ರೆ ಸಂಪನ್ನವಾದ ಬಳಿಕ ಎ.20ರಂದು ಸಂಪ್ರೋಕ್ಷಣೆ ಮತ್ತು ರಾತ್ರಿ ಮಂತ್ರಾಕ್ಷತೆ ವಿತರಣೆ ನಡೆಯಿತು.

ದೇವಳದಲ್ಲಿ ರಾತ್ರಿ ಪೂಜೆಯ ಬಳಿಕ ದೇವಳದ ಸತ್ಯ ಧರ್ಮ ನಡೆಯಲ್ಲಿ ಬ್ರಹ್ಮಶ್ರೀ ವೇ ಮೂ ಕುಂಟಾರು ರವೀಶ ತಂತ್ರಿಯವರು ಮಂತ್ರಾಕ್ಷತೆಯನ್ನು ಭಕ್ತರಿಗೆ ವಿತರಿಸಿದರು. ಇದೇ ಸಂರ್ಭದಲ್ಲಿ ದೇವರ ನಿತ್ಯ ಬಲಿ ಉತ್ಸವ, ವಸಂತ ಕಟ್ಟೆಯಲ್ಲಿ ಪೂಜೆ ನಡೆಯಿತು.

ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮುಳಿಯ ಕೇಶವ ಪ್ರಸಾದ್, ಸಮಿತಿ ಸದಸ್ಯರಾದ ವೇ.ಮೂ ವಿ.ಎಸ್ ಭಟ್, ರವೀಂದ್ರನಾಥ ರೈ ಬಳ್ಳಮಜಲು, ಶೇಖರ್ ನಾರಾವಿ, ರಾಮಚಂದ್ರ ಕಾಮತ್, ಬಿ.ಐತ್ತಪ್ಪ ನಾಯ್ಕ್, ರಾಮ್‌ದಾಸ್ ಗೌಡ, ವೀಣಾ ಬಿ.ಕೆ. ಡಾ. ಸುಧಾ ಎಸ್ ರಾವ್, ದೇವಳದ ಕಾರ್ಯನಿರ್ವಹಣಾಧಿಕಾರಿ ನವೀನ್ ಕುಮಾರಿ ಭಂಡಾರಿ ಹೆಚ್, ಕಚೇರಿ ವ್ಯವಸ್ಥಾಪಕ ಹರೀಶ್ ಶೆಟ್ಟಿ, ದೇವಳದ ವಾಸ್ತು ಇಂಜಿನಿಯರ್ ಪಿ.ಜಿ.ಜಗನ್ನಿವಾಸ ರಾವ್ ಸಹಿತ ಹಲವಾರು ಮಂದಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ದೇವಳದ ಪೂಜೆಯ ಆರಂಭದಲ್ಲಿ ಜಾತ್ರೋತ್ಸವದಲ್ಲಿ ವಿವಿಧ ಸೇವಾ ಕಾರ್ಯಕ್ಕೆ ಪಾತ್ರರಾದ ದೇವಳದ ಅರ್ಚಕರು, ಪರಿಚಾರಕ ವರ್ಗಕ್ಕೆ ಸಂಪ್ರದಾಯದಂತೆ ಹೊಸ ಬಟ್ಟೆಗಳನ್ನು ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮುಳಿಯ ಕೇಶವಪ್ರಸಾದ್ ಅವರು ವಿತರಿಸಿದರು.

LEAVE A REPLY

Please enter your comment!
Please enter your name here