ಆಲಂಕಾರು: ಶ್ರೀ ದುರ್ಗಾಂಬಾ ಪ.ಪೂ.ಕಾಲೇಜಿನಲ್ಲಿ ಉಚಿತ ಬೇಸಿಗೆ ಕ್ರೀಡಾ ತರಬೇತಿ ಶಿಬಿರ

0

ಆಲಂಕಾರು: ಶ್ರೀ ದುರ್ಗಾಂಬಾ ಪದವಿ ಪೂರ್ವ ಕಾಲೇಜು ಆಲಂಕಾರು ಮತ್ತು ಮಂಗಳೂರು ವಿಶ್ವವಿದ್ಯಾನಿಲಯ ದೈಹಿಕ ಶಿಕ್ಷಣ ವಿಭಾಗದ ಆಶ್ರಯದಲ್ಲಿ ನಡೆಯುವ 10 ದಿನಗಳ ಉಚಿತ ಬೇಸಿಗೆ ಕ್ರೀಡಾ ತರಬೇತಿ ಶಿಬಿರದ ಉದ್ಘಾಟನಾ ಸಮಾರಂಭ ಎ.15ರಂದು ಆಲಂಕಾರು ಶ್ರೀ ದುರ್ಗಾಂಬಾ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು.


ಆಲಂಕಾರು ಗ್ರಾಮ ಪಂಚಾಯತಿನ ಅಭಿವೃದ್ಧಿ ಅಧಿಕಾರಿ ಜಗನ್ನಾಥ ಶೆಟ್ಟಿ ಅವರು ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು. ಸಭಾಧ್ಯಕ್ಷತೆಯನ್ನು ಆಡಳಿತ ಮಂಡಳಿಯ ಅಧ್ಯಕ್ಷರಾದ ದಯಾನಂದ ರೈ ಮನವಳಿಕೆ ಅವರು ವಹಿಸಿದ್ದರು. ಸಮಾರಂಭದಲ್ಲಿ ಆಡಳಿತ ಮಂಡಳಿಯ ಸದಸ್ಯರಾದ ಮುತ್ತಪ್ಪ ಪೂಜಾರಿ ನೈಯ್ಯಲ್ಗ, ದಯಾನಂದ ಗೌಡ ಆಲಡ್ಕ, ಇಂದುಶೇಖರ ಶೆಟ್ಟಿ, ತಾರನಾಥ ರೈ ನಗ್ರಿ, ರಾಮರಾಜ ನಗ್ರಿ, ಮುಖ್ಯಗುರು ಶ್ರೀಪತಿ ರಾವ್, ಪ್ರಾಂಶುಪಾಲರಾದ ನವೀನ್ ರೈ, ಹಿಂದಿ ಶಿಕ್ಷಕರಾದ ಮಹೇಶ್ ಲಮಾಣಿ, ವಿಜ್ಞಾನ ಶಿಕ್ಷಕಿ ನಿವ್ಯ ರೈ, ಬೋಧಕೇತರ ವೃಂದದವರು ಉಪಸ್ಥಿತರಿದ್ದರು.


ಆಂಗ್ಲ ಭಾಷಾ ಶಿಕ್ಷಕ ಜನಾರ್ದನ ಅವರು ಕಾರ್ಯಕ್ರಮ ನಿರೂಪಿಸಿದರು. ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೇಯಸ್ಸು ರೈ ಅವರು ಕ್ರೀಡಾ ತರಬೇತಿ ಶಿಬಿರದ ಮಹತ್ವ ಮತ್ತು ಉದ್ದೇಶದ ಕುರಿತಾಗಿ ಶಿಬಿರಾರ್ಥಿಗಳಿಗೆ ತಿಳಿಸಿದರು.

LEAVE A REPLY

Please enter your comment!
Please enter your name here