ದೇವಸ್ಥಾನದ ಜಾಗದಲ್ಲಿ ರಾಜಕೀಯ ಪ್ರಚಾರ ನಿಷೇಧಿಸುವಂತೆ ಧಾರ್ಮಿಕ ದತ್ತಿ ಇಲಾಖೆಗೆ ಮನವಿ

0

ಪುತ್ತೂರು: ಧಾರ್ಮಿಕ ದತ್ತಿ ಇಲಾಖೆಗೆ ಒಳಪಟ್ಟ ದೇವಸ್ಥಾನಗಳ ಜಾಗದಲ್ಲಿ ರಾಜಕೀಯ ಪಕ್ಷಗಳ ಪ್ರಚಾರ ಮಾಡುವುದನ್ನು ನಿಷೇಧಿಸುವಂತೆ ಸಾಮಾಜಿಕ ಕಾರ್ಯಕರ್ತ ಹರಿಪ್ರಸಾದ್ ಶೆಟ್ಟಿ ನೆಲ್ಲಿಕಟ್ಟೆಯವರು ಧಾರ್ಮಿಕ ಧತ್ತಿ ಇಲಾಖೆ ಆಯುಕ್ತರಿಗೆ ಮನವಿ ಮಾಡಿದ್ದಾರೆ.

ಯಾವುದೇ ರಾಜಕೀಯದ ಪಕ್ಷಗಳು ದೇವಸ್ಥಾನದ ಧಾರ್ಮಿಕ ದತ್ತಿ ಇಲಾಖೆಗೆ ಒಳಪಟ್ಟ ದೇವಸ್ಥಾನದ ಜಾಗದಲ್ಲಿ ರಾಜಕೀಯ ಪ್ರಚಾರ ಮಾಡುವುದು ನಿಷೇಧಿಸಬೇಕು. ದೇವಸ್ಥಾನದಲ್ಲಿ ಪಕ್ಷದ ಯಾವುದೇ ಚಟುವಟಿಕೆಗಳಿಗೆ ಅವಕಾಶ ಕೊಡಬಾರದು ಎಂದು ಮನವಿಯಲ್ಲಿ ಆಗ್ರಹಿಸಿದ್ದಾರೆ.

ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಯಾವುದೇ ಪಕ್ಷದವರಿಗೂ ಕೂಡ ದೇವಸ್ಥಾನಕ್ಕೆ ಸಂಬಂಧಪಟ್ಟ ಜಾಗದಲ್ಲಿ ಅವಕಾಶವನ್ನು ನೀಡದಂತೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿಗಳಿಗೆ ಆದೇಶವನ್ನು ನೀಡುವಂತೆ ಮನವಿಯಲ್ಲಿ ಆಗ್ರಹಿಸಿದ್ದಾರೆ.

LEAVE A REPLY

Please enter your comment!
Please enter your name here