ವಿಧಾನ ಸಭಾ ಚುನಾವಣೆ- ನಾಮಪತ್ರ ಪರಿಶೀಲನೆ- ಎಲ್ಲಾ ನಾಮಪತ್ರಗಳು ಕ್ರಮಬದ್ಧ

0

ಪುತ್ತೂರು; ಕರ್ನಾಟಕ ವಿಧಾನ ಸಭಾ ಚುನಾವಣೆಗೆ ಸಂಬಂಧಿಸಿದಂತೆ ಎ.21ರಂದು ನಾಮಪತ್ರ ಪರಿಶೀಲನೆ ನಡೆದಿದ್ದು ಎಲ್ಲಾ ನಾಮಪತ್ರಗಳು ಕ್ರಮಬದ್ಧವಾಗಿರುವುದಾಗಿ ಚುನಾವಣಾಧಿಕಾರಿಯಾಗಿರುವ ಸಹಾಯಕ ಆಯುಕ್ತ ಗಿರೀಶ್ ನಂದನ್ ತಿಳಿಸಿದ್ದಾರೆ.


ನಾಮಪತ್ರ ಪರಿಶೀಲನೆಯು ತಾಲೂಕು ಆಡಳಿತ ಸೌಧದಲ್ಲಿರುವ ಸಹಾಯಕ ಆಯುಕ್ತರ ಕಚೇರಿಯ ಸಭಾಂಗಣದಲ್ಲಿ ನಡೆಯಿತು. ಚುನಾವಣಾಧಿಕಾರಿಯಾಗಿರುವ ಸಹಾಯಕ ಆಯುಕ್ತ ಗಿರೀಶ್ ನಂದನ್ ಹಾಗೂ ಸಹಾಯಕ ಚುನವಣಾಧಿಕಾರಿ ತಹಶೀಲ್ದಾರ್ ಶಿವಶಂಕರ ನಾಮಪತ್ರಗಳ ಪರಿಶೀಲನೆ ನಡೆಸಿದರು. ವಿವಿಧ ಪಕ್ಷಗಳ ಅಭ್ಯರ್ಥಿಗಳು ಹಾಗೂ ಪಕ್ಷೇತರ ಅಭ್ಯರ್ಥಿಗಳು ನಾಮಪತ್ರ ಪರಿಶೀಲನೆಯ ವೇಳೆ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here