ಬಡಗನ್ನೂರು :ಮನವಿಗೆ ಸ್ಪಂದಿಸಿದ ಜಿಲ್ಲಾಧಿಕಾರಿ

0

ಬಡಗನ್ನೂರು: ಗ್ರಾಮ ಪಂಚಾಯತ್‌ ವ್ಯಾಪ್ತಿಯ ಸಜಂಕಾಡಿ ಅಪಾಯಕಾರಿ ರಸ್ತೆ ತಿರುವಿಗೆ ಮುಕ್ತಿ ಸಿಕ್ಕಿದೆ.

ಆರು ತಿಂಗಳ ಹಿಂದೆ ಈ ಭಾಗದಲ್ಲಿ ಗ್ರಾಮ ವಾಸ್ತವ್ಯ ಹೂಡಿದ್ದ ವೇಳೆ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ ಸ್ಥಳೀಯರು ಅಪಾಯಕಾರಿ ತಿರುವಿನಲ್ಲಿ ತಡೆಗೋಡೆಗೆ ಬೇಡಿಕೆ ಸಲ್ಲಿಸಿದ್ದರು. ಖುದ್ದು ಸ್ಥಳ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ ತಕ್ಷಣ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಆದೇಶ ನೀಡಿ ತಡೆಗೋಡೆ ನಿರ್ಮಾಣಕ್ಕೆ ಕ್ರಮಕೈಗೊಳ್ಳುವಂತೆ ಸೂಚಿಸಿದ್ದರು. ಜಿಲ್ಲಾಧಿಕಾರಿ ಸೂಚನೆಯ ಆರು ತಿಂಗಳಲ್ಲಿ ತಡೆಗೋಡೆ ನಿರ್ಮಾಣವಾಗಿದ್ದು, ಅಪಾಯಕಾರಿ ತಿರುವಿಗೆ ಮುಕ್ತಿ ದೊರಕಿದೆ.

ಬಡಗನ್ನೂರು ಗ್ರಾಮ ಪಂಚಾಯತ್‌ ವ್ಯಾಪ್ತಿಯ ಬಡಗನ್ನೂರಿನ ಸುಳ್ಯಪದವು ಗಡಿ ಪ್ರದೇಶದಲ್ಲಿ ಈ ಹಿಂದಿನ ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ ಆರು ತಿಂಗಳ ಹಿಂದೆ ಗ್ರಾಮ ವಾಸ್ತವ್ಯ ಹೂಡಿದ್ದರು.

LEAVE A REPLY

Please enter your comment!
Please enter your name here