ಗಾಯಗೊಂಡಿದ್ದ ಬಾಲಕಿಯನ್ನು ಆಸ್ಪತ್ರೆಗೆ ಕರೆದೊಯ್ದು ಮಾನವೀಯತೆ ಮೆರೆದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ !

0

ಪುತ್ತೂರು: ಜಿಡೆಕಲ್ಲು ಸಮೀಪ ಅಪಘಾತವೊಂದರಿಂದ ಗಾಯಗೊಂಡ ಬಾಲಕಿಯನ್ನು ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ತಮ್ಮ ಕಾರಿನಲ್ಲಿ ಪುತ್ತೂರು ಆಸ್ಪತ್ರೆಗೆ ಕರೆದೊಯ್ದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕಳುಹಿಸಿಕೊಟ್ಟ ಘಟನೆ ಎ.21ರಂದು ನಡೆದಿದೆ.


ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಚುನಾವಣಾ ಪ್ರಚಾರದ ಹಿನ್ನೆಲೆಯಲ್ಲಿ ಜಿಡೆಕಲು ರಸ್ತೆಯಾಗಿ ಪುತ್ತೂರು ಕಡೆ ಬರುತ್ತಿದ್ದ ವೇಳೆ ಜಿಡೆಕಲ್ಲು ಎಂಬಲ್ಲಿ ರಸ್ತೆದಾಟುತ್ತಿದ್ದ ಬಾಲಕಿಯೊಬ್ಬರಿಗೆ ವಾಹನವೊಂದು ಡಿಕ್ಕಿಯಾಗಿದೆ ಬಾಲಕಿ ತೀವ್ರವಾಗಿ ಗಾಯಗೊಂಡಿದ್ದನ್ನು ಕಂಡು ತಕ್ಷಣ ತಮ್ಮ ಕಾರಿನಲ್ಲಿ ಬಾಲಕಿಯನ್ನು ಪುತ್ತೂರು ಆದರ್ಶ ಆಸ್ಪತ್ರೆಗೆ ಕರೆದೊಯ್ದಿದ್ದರು. ಬಾಲಕಿ ತೀವ್ರ ಗಾಯಗೊಂಡಿರುವುದರಿಂದ ಆಕೆಯನ್ನು ತಮ್ಮ ಕಾರ್ಯಕರ್ತರ ಜತೆ ಮಂಗಳೂರು ಇಂಡಿಯಾನ ಆಸ್ಪತ್ರೆಗೆ ಆಂಬ್ಯುಲೆನ್ಸ್‌ ನಲ್ಲಿ ಕಳುಹಿಸಿಕೊಟ್ಟಿದ್ದಾರೆ.

ಚುನಾವಣಾ ಪ್ರಚಾರದ ಒತ್ತಡದ ನಡುವೆಯೂ ಗಾಯಾಳುವನ್ನು ಆಸ್ಪತ್ರೆಗೆ ಕರೆದೊಯ್ದು ಮಾನವೀಯತೆ ಮೆರೆದಿರುವುದು ಸಾರ್ವಜನಿಕ ವಲಯದಲ್ಲಿ ಪ್ರಶಂಸೆಗೊಳಪಟ್ಟಿದೆ.

LEAVE A REPLY

Please enter your comment!
Please enter your name here