ವಿಟ್ಲ : ವ್ಯಕ್ತಿ ನಾಪತ್ತೆ – ಪ್ರಕರಣ ದಾಖಲು

0

ವಿಟ್ಲ: ಪತ್ನಿಯ ತವರು ಮನೆಗೆ ತೆರಳಿದ್ದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಘಟನೆ ವಿಟ್ಲ ಠಾಣಾ ವ್ಯಾಪ್ತಿಯ ಅನಂತಾಡಿ ಗ್ರಾಮದ ದರ್ಖಾಸು ಎಂಬಲ್ಲಿ ನಡೆದಿದೆ. ಬಂಟ್ವಾಳ ತಾಲೂಕು ಸಜಿಪಮೂಡ ಗ್ರಾಮದ ಕಾರಾಜೆ ನಿವಾಸಿ ಲೋಕನಾಥ ಪೂಜಾರಿ (48 ವ.) ನಾಪತ್ತೆಯಾದವರು.

ಎ.17 ರಂದು ಲೋಕನಾಥ ಪೂಜಾರಿಯವರು ತನ್ನ ಮನೆಯಾದ ಕಾರಾಜೆಯಿಂದ ಪತ್ನಿಯ ತಾಯಿ ಮನೆಯಾದ ಬಂಟ್ವಾಳ ತಾಲೂಕು ಅನಂತಾಡಿ ಗ್ರಾಮದ ದರ್ಖಾಸು ಎಂಬಲ್ಲಿಗೆ ತೆರಳಿದ್ದು, ಆ ದಿನ ಅಲ್ಲಿಯೇ ಉಳಿದುಕೊಂಡಿದ್ದರು. ಎ.18 ರಂದು ಅನಂತಾಡಿಯಿಂದ ಕಾರಾಜೆಗೆ ಹೋಗುತ್ತೇನೆ ಎಂದು ಹೇಳಿ ಅಲ್ಲಿಂದ ತೆರಳಿದ್ದವರು ಈವರೆಗೆ ಮನೆಗೆ ಬಂದಿರುವುದಿಲ್ಲ. ಲೋಕನಾಥ ಪೂಜಾರಿಯವರು ಸ್ವಲ್ಪ ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದು, ಅದಕ್ಕೆ ಚಿಕಿತ್ಸೆ ಪಡೆಯುತ್ತಿದ್ದರು. ಮನೆಯಿಂದ ಹೊರಡುವ ವೇಳೆ ಮೊಬೈಲ್ ಫೋನ್ ಬಿಟ್ಟು ತೆರಳಿದ್ದು, ಸಂಬಂಧಿಕರ ಮನೆಗಳಿಗೆ ಫೋನ್ ಮಾಡಿ ವಿಚಾರಿಸಿದಾಗ, ಎಲ್ಲಾ ಕಡೆ ಹುಡುಕಿದಾಗ ಎಲ್ಲಿಯೂ ಪತ್ತೆಯಾಗಿಲ್ಲ ಎಂದು ಲೊಕನಾಥ ಪೂಜಾರಿಯವರ ಪತ್ನಿ ಹರಿಣಾಕ್ಷಿರವರು ವಿಟ್ಲ ಠಾಣಾ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ಭಾವಚಿತ್ರದಲ್ಲಿ ಕಾಣುವ ವ್ಯಕ್ತಿಯನ್ನು ಯಾರಾದರೂ ಕಂಡಲ್ಲಿ ಹತ್ತಿರದ ಪೊಲೀಸ್ ಠಾಣೆ ಅಥವಾ ವಿಟ್ಲ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಪೊಲೀಸರ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here