ರಂಗೇರಿದ ಚುನಾವಣಾ ಕಣ :ಪಾಣಾಜೆಯಲ್ಲಿ ಅಶೋಕ್ ರೈ ಅವರಿಂದ ಭರ್ಜರಿ ಪ್ರಚಾರ

0

ಪುತ್ತೂರು : ಪುತ್ತೂರು ವಿಧಾನಸಭಾ ಕ್ಷೇತ್ರದ ಚುನಾವಣಾ ಕಣ ರಂಗೇರುತ್ತಿದ್ದು ಅಭ್ಯರ್ಥಿಗಳು ಭರ್ಜರಿ ಪ್ರಚಾರದಲ್ಲಿ ತೊಡಗಿದ್ದಾರೆ. ಸಲ್ಲಿಕೆ ಆದ ನಾಮಪತ್ರಗಳು ಕ್ರಮಬದ್ಧವಾಗಿದ್ದು ಎಲ್ಲಾ ನಾಮಪತ್ರಗಳು ಅಂಗೀಕಾರಗೊಂಡಿದೆ. ಪುತ್ತೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಮಿಂಚಿನ ಪ್ರವಾಸದಲ್ಲಿದ್ದು ಅಲ್ಲಲ್ಲಿ ಸಭೆಗಳನ್ನು ನಡೆಸಿ ಮತಯಾಚನೆ ನಡೆಸುತ್ತಿದ್ದಾರೆ.

ಗಡಿಭಾಗದ ಪಾಣಾಜೆ ಪರಿಸರದಲ್ಲಿ ಚುನಾವಣಾ ಪ್ರಚಾರ ನಡೆಸಿದ್ದು ಮತದಾರರ ಬಳಿ ತೆರಳಿ ಮತಯಾಚನೆ ನಡೆಸಿದರು. ಇದೇ ವೇಳೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರನ್ನು ಮತ್ತು ನಾಡಿನ ಹಿರಿಯರನ್ನು ವೈಯುಕ್ತಿಕವಾಗಿ ಭೇಟಿಯಾಗಿ ಮತಯಾಚನೆ ಮಾಡಿ ಆಶೀರ್ವಾದ ಪಡೆದರು. ಈ ವೇಳೆ ಕಾಂಗ್ರೆಸ್ ಪಕ್ಷದ ಪದಾಧಿಕಾರಿಗಳು, ನಾಯಕರು, ಅಭಿಮಾನಿಗಳು, ಪ್ರಮುಖರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here