ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪ್ರಚಾರ ಸಮಿತಿಗೆ ಎಂ.ಪಿ. ಅಬೂಬಕ್ಕರ್, ವೇದನಾಥ ಸುವರ್ಣ ಸಹಸಂಚಾಲಕರಾಗಿ ಆಯ್ಕೆ

0

ಪುತ್ತೂರು: ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪ್ರಚಾರ ಸಮಿತಿಗೆ ಎಂ.ಪಿ. ಅಬೂಬಕ್ಕರ್ ಮತ್ತು ವೇದನಾಥ ಸುವರ್ಣ ಸಹಸಂಚಾಲಕರಾಗಿ ಆಯ್ಕೆಯಾಗಿದ್ದಾರೆ.
ಪುತ್ತೂರು ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರಾದ ಭಾಸ್ಕರ ಗೌಡ ಕೋಡಿಂಬಾಳ, ಕ್ಷೇತ್ರದ ಉಭಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಎಂ.ಬಿ. ವಿಶ್ವನಾಥ ರೈ, ಮತ್ತು ಡಾ. ರಾಜಾರಾಮ್ ಇವರುಗಳ ಶಿಫಾರಸು ಮತ್ತು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಅನುಮೋದನೆ ಮೇರೆಗೆ ದ.ಕ. ಜಿಲ್ಲೆಯ ಪ್ರಚಾರ ಸಮಿತಿಯ ಅಧ್ಯಕ್ಷ ಭರತ್ ಮುಂಡೋಡಿಯವರು ನೇಮಕ ಮಾಡಿದ್ದಾರೆ.

ಎಂ. ಅಬೂಬಕ್ಕರ್ ಇವರು ಪುತ್ತೂರು ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯಲ್ಲಿ ಹಾಗೂ ವೇದನಾಥ ಸುವರ್ಣ ಇವರು ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯಲ್ಲಿ ಪಕ್ಷದ ಅನ್ಯಾನ್ಯ ಜವಾಬ್ಧಾರಿ ಹೊತ್ತ ಪದಾಧಿಕಾರಿಗಳ ಸಹಕಾರದೊಂದಿಗೆ ಪ್ರಚಾರ ಕಾರ್ಯವನ್ನು ಬಿರುಸಿನಿಂದ ನಡೆಸಲು ಸೂಚಿಸಲಾಗಿದೆ.

LEAVE A REPLY

Please enter your comment!
Please enter your name here