ಬಿಜೆಪಿ ಮಹಿಳಾ ಸಮಾವೇಶದ ಪೂರ್ವಸಿದ್ಧತಾ ಸಭೆ

0

ಪುತ್ತೂರು: ಪುತ್ತೂರು ಜೈನಭವನದಲ್ಲಿ ಎ.26ರಂದು ನಡೆಯಲಿರುವ ಬಿಜೆಪಿ ಮಹಿಳಾ ಸಮಾವೇಶದ ಪೂರ್ವಸಿದ್ಧತಾ ಸಭೆ ಬಿಜೆಪಿ ಚುನಾವಣಾ ಕಛೇರಿಯಲ್ಲಿ ನಡೆಯಿತು.

ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಮಾತನಾಡಿ ಮಹಿಳಾ ಸಮಾವೇಶ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಕೇಂದ್ರ ಆರೋಗ್ಯ ರಾಜ್ಯಮಂತ್ರಿ ಡಾ.ಭಾರತಿ ಪ್ರವೀಣ್ ಪವಾರ್ ಭಾಗವಹಿಸಲಿದ್ದಾರೆ. ಪುತ್ತೂರಿನ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಮನವಿ ಮಾಡಿದರು. ಮಹಿಳಾ ಮೋರ್ಚದ ರಾಷ್ಟ್ರೀಯ ಉಪಾಧ್ಯಕ್ಷೆ ಜ್ಯೋತಿ ಪಾಂಡೆ, ಮಹಿಳಾ ಆಯೋಗದ ಮಾಜಿ ಸದಸ್ಯ, ಮಹಿಳಾ ಕಾರ್ಯದ ರಾಜ್ಯ ಸಹ ಸಂಚಾಲಕಿ ಶ್ಯಾಮಲ ಕುಂದರ್, ಕೇರಳ ರಾಜ್ಯ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಸಿನಿ, ಕರ್ನಾಟಕ ರಾಜ್ಯ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಶಿಲ್ಪ ಸುವರ್ಣ, ಜಿಲ್ಲಾ ಮಹಿಳಾ ಮೋರ್ಚಾದ ಅಧ್ಯಕ್ಷೆ ಧನಲಕ್ಷ್ಮಿ ಗಟ್ಟಿ, ಪ್ರಧಾನ ಕಾರ್ಯದರ್ಶಿ ತ್ರಿವೇಣಿ ಪೆರುವೋಡಿ, ಜಿಲ್ಲಾ ಮಹಿಳಾ ಕಾರ್ಯದ ಸಹಸಂಚಾಲಕಿ ಡಾ.ಮಂಜುಳಾ, ಮಾಜಿ ಶಾಸಕ ಸಂಜೀವ ಮಠಂದೂರು, ಜಿಲ್ಲಾ ಬಿಜೆಪಿಯ ಉಪಾಧ್ಯಕ್ಷ ರಾಧಾಕೃಷ್ಣ ಬೂಡಿಯಾರ್, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಮದಾಸ್ ಬಂಟ್ವಾಳ್, ಪುತ್ತೂರು ಚುನಾವಣಾ ಪ್ರಭಾರಿ ರಾಜೇಶ್ ಕಾವೇರಿ, ಗ್ರಾಮಂತರ ಮಂಡಲದ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ್ ಮುಂಗ್ಲಿಮನೆ ಹಾಗೂ ಪುತ್ತೂರು ನಗರ ಮಂಡಲದ ಪ್ರಧಾನ ಕಾರ್ಯದರ್ಶಿ ಜಯಶ್ರೀ ಶೆಟ್ಟಿ, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಗ್ರಾಮ ಹಾಗೂ ನಗರ ಮಂಡಲಗಳ ಮಹಿಳಾ ಮೋರ್ಚಾದ ಅಧ್ಯಕ್ಷೆ ಯಶಸ್ವಿನಿ ಶಾಸ್ತ್ರೀ, ಶರಾವತೀ ರವಿನಾರಾಯಣ, ಗ್ರಾಮ ತಾಲೂಕು ಜಿಲ್ಲಾ ಮಟ್ಟದ ಚುನಾಯಿತ ಮಹಿಳಾ ಪ್ರತಿನಿಧಿಗಳು, ನಗರಸಭೆಯ ಮಹಿಳಾ ಕೌನ್ಸಿಲರ್‌ಗಳು, ಮಹಿಳೆಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here