ದಕ್ಷಿಣ ಕನ್ನಡ ಜಿಲ್ಲಾ ದಲಿತ ಸೇವಾ ಸಮಿತಿ ಆಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ದಿವ್ಯಪ್ರಭಾ ಗೌಡ ಭಾಗಿ

0

ಪುತ್ತೂರು : ದಕ್ಷಿಣ ಕನ್ನಡ ಜಿಲ್ಲಾ ದಲಿತ ಸೇವಾ ಸಮಿತಿ ಆಶ್ರಯದಲ್ಲಿ ಜಿಲ್ಲೆಯ ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಆಯೋಜಿಸಿದ್ದ ವಿವಿಧ ಆಟೋಟ ಸ್ಪರ್ಧಾ ಕಾರ್ಯಕ್ರಮದಲ್ಲಿ ಪುತ್ತೂರು ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ದಿವ್ಯ ಪ್ರಭಾ ಗೌಡ ಭಾಗವಹಿಸಿದರು.

ಸಂಘದ ವತಿಯಿಂದ ಸ್ಥಾಪಕ ಅಧ್ಯಕ್ಷ ಸೇಸಪ್ಪ ಬೆದ್ರ ಕಾಡು,ಜಿಲ್ಲಾಧ್ಯಕ್ಷ ಚಂದ್ರಶೇಖರ್ ವಿಟ್ಲ, ಪುತ್ತೂರು ತಾಲೂಕು ಅಧ್ಯಕ್ಷ ಅಣ್ಣಪ್ಪ ಕಾರೆಕ್ಕಾಡು ದಿವ್ಯಪ್ರಭಾ ಅವರನ್ನು ಸ್ವಾಗತಿಸಿದರು. ಸರಕಾರದ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದ ದಿವ್ಯ ಪ್ರಭಾ ಸಂಘದ ಪದಾಧಿಕಾರಿಗಳೊಂದಿಗೆ ಮಾತುಕತೆ ನಡೆಸಿ ಮತಯಾಚನೆ ನಡೆಸಿದರು. ಬಿರುಸಿನ ಪ್ರಚಾರದಲ್ಲಿ ತೊಡಗಿರುವ ಜೆಡಿಎಸ್ ಅಭ್ಯರ್ಥಿ ಪಕ್ಷದ ನೆಲೆಯನ್ನು ಭದ್ರಗೊಳಿಸುವತ್ತ ಮುನ್ನಡೆಯುತ್ತಿದ್ದಾರೆ.

LEAVE A REPLY

Please enter your comment!
Please enter your name here