ಜೆಡಿಎಸ್ ಅಭ್ಯರ್ಥಿ ದಿವ್ಯಪ್ರಭಾ ಗೌಡ ಚಿಲ್ತಡ್ಕರಿಂದ ಲಂಚ ಭ್ರಷ್ಟಾಚಾರ ವಿರುದ್ಧ ಪ್ರತಿಜ್ಞೆ ಸ್ವೀಕಾರ

0

ಪುತ್ತೂರು ತಾಲೂಕಿನಲ್ಲಿ ಲಂಚ ಭ್ರಷ್ಟಾಚಾರ ತುಂಬಿದೆ ಎನ್ನುವುದು ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಜನರ ನೋವು. ಯಾವುದೇ ಇಲಾಖೆಯಲ್ಲಿ ಕೂಡ ಲಂಚ ಇಲ್ಲದೆ ಕೆಲಸ ಕಾರ್ಯಗಳು ಆಗುತ್ತಿಲ್ಲ ಎನ್ನುವುದು ಜನಸಾಮಾನ್ಯರ ಕೂಗು. ನಾನು ಪುತ್ತೂರು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದೇನೆ. ಈ ಸಂದರ್ಭದಲ್ಲಿ ನಾನು ಲಂಚ ಭ್ರಷ್ಟಾಚಾರದ ವಿರುದ್ಧ ಪ್ರಾಮಾಣಿಕವಾಗಿ ಹೋರಾಟ ಮಾಡುತ್ತೇನೆ ಮತ್ತು ನಾನು ಗೆದ್ದರೂ, ಸೋತರೂ ಈ ಕ್ಷೇತ್ರದ ಜನರಿಂದ ಯಾವುದೇ ಇಲಾಖೆಯ ಅಧಿಕಾರಿಗಳು ಪಡೆದ ಲಂಚ, ಭ್ರಷ್ಟಾಚಾರದ ಹಣವನ್ನು ಜನರಿಗೆ ಹಿಂತಿರುಗಿಸಿ ಕೊಡುವಲ್ಲಿ ಪ್ರಾಮಾಣಿಕ ಪ್ರಯತ್ನವನ್ನು ಮಾಡುತ್ತೇನೆ. ಅಧಿಕಾರಿಗಳು ಜನರಿಂದ ಪಡೆದ ಲಂಚದ ಹಣವನ್ನು ಜನರಿಗೆ ಹಿಂತಿರುಗಿಸಿ ಕೊಡುವ ಘೋಷಣೆಯನ್ನು ಕೂಡ ಮಾಡುತ್ತಿದ್ದೇನೆ. ಈ ಬಗ್ಗೆ ಪ್ರತಿಜ್ಞೆಯನ್ನು ಕೂಡ ಮಾಡುತ್ತಿದ್ದೇನೆ ಎಂದು ಜೆಡಿಎಸ್ ಅಭ್ಯರ್ಥಿ ದಿವ್ಯಪ್ರಭಾ ಗೌಡ ಚಿಲ್ತಡ್ಕ ಹೇಳಿದ್ದಾರೆ.

LEAVE A REPLY

Please enter your comment!
Please enter your name here