ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಾಳೆ(ಏ.25) ಸುಳ್ಯ, ಪುತ್ತೂರು ಭೇಟಿ, ಏ.27 ರಾಹುಲ್ ಗಾಂಧಿ ಜಿಲ್ಲೆಗೆ

0

ಮಂಗಳೂರು:ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಚುನಾವಣಾ ಪ್ರಚಾರಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಲಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಡಾ|ಮಂಜುನಾಥ್ ಭಂಡಾರಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಏ.24ರಂದು ಮಂಗಳೂರಿಗೆ ಆಗಮಿಸಿ ಏ.25ರಂದು ಸುಳ್ಯ, ಪುತ್ತೂರು, ಬೆಳ್ತಂಗಡಿ ಕ್ಷೇತ್ರಗಳಿಗೆ ಭೇಟಿ ನೀಡಲಿದ್ದಾರೆ. ಸಂಜೆ 4 ಗಂಟೆಗೆ ನಗರದ ಟಿ.ಎಂ.ಎ.ಪೈ ಸಭಾಂಗಣದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ ಎಂದು ಡಾ|ಮಂಜುನಾಥ ಭಂಡಾರಿ ಹೇಳಿದರು.
ಏ.27ರಂದು ಕಾಪುವಿಗೆ ಆಗಮಿಸುವ ರಾಹುಲ್ ಗಾಂಧಿ ಅಲ್ಲಿನ ಮೀನುಗಾರರ ಜೊತೆಗಿನ ಸಂವಾದದಲ್ಲಿ ಭಾಗವಹಿಸಲಿದ್ದಾರೆ. ಸಂಜೆ 5 ಗಂಟೆಗೆ ಮಂಗಳೂರು ನಗರದಲ್ಲಿ ರೋಡ್ ಶೋ ನಡೆಸಲಿದ್ದಾರೆ ಎಂದು ಮಂಜುನಾಥ್ ಭಂಡಾರಿ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ಕೇರಳದ ಶಾಸಕ ರೋಝಿ ಜಾನ್, ದ.ಕ.ಯುವ ಕಾಂಗ್ರೆಸ್ ಅಧ್ಯಕ್ಷ ಲುಕ್ಮಾನ್ ಬಂಟ್ವಾಳ್, ಎನ್‌ಎಸ್‌ಯುಐ ಜಿಲ್ಲಾಧ್ಯಕ್ಷ ಸವಾದ್ ಸುಳ್ಯ, ಕಾಂಗ್ರೆಸ್ ಮುಖಂಡರಾದ ಪ್ರವೀಣ್‌ಚಂದ್ರ ಆಳ್ವ, ಸಂತೋಷ್ ಕುಮಾರ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here