ಕುಂಬ್ರ: ಕಲ್ಲಡ್ಕದಲ್ಲಿ ಪುತ್ತಿಲರಿಂದ ಕಾರ್ಯಕರ್ತರ ಸಭೆ

0

ಪುತ್ತೂರು: ಒಳಮೊಗ್ರು ಗ್ರಾಮದ ಕಲ್ಲಡ್ಕದಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದ ಪಕ್ಷೆತರ ಅಭ್ಯರ್ಥಿ ಅರುಣ್‌ಕುಮಾರ್ ಪುತ್ತಿಲರವರು ಕಾರ್ಯಕರ್ತರ ಸಭೆ ನಡೆಸಿ ಮತಯಾಚನೆ ಮಾಡಿದರು.

ಕಲ್ಲಡ್ಕ ನಿವಾಸಿ ಮೋಹನ್ ರೈ ಯವರ ಮನೆಯಲ್ಲಿ ನಡೆದ ಈ ಸಭೆಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಪುತ್ತಿಲರು ಈ ಬಾರಿ ನಿಮ್ಮೆಲ್ಲರ ಸಹಕಾರದ ನಿರೀಕ್ಷೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣಾ ಕಣಕ್ಕೆ ಇಳಿದಿದ್ದೇನೆ. ಕಳೆದ ಅನೇಕ ವರ್ಷಗಳಿಂದ ತಾನು ಹಿಂದುತ್ವಕ್ಕಾಗಿ ಕೆಲಸ ಮಾಡಿದ್ದು, ಕ್ಷೇತ್ರದ ಪ್ರತಿಯೊಬ್ಬರಿಗೂ ಈ ವಿಚಾರ ಗೊತ್ತಿದೆ. ಕ್ಷೇತ್ರದ ಜನರ ವಿಶ್ವಾಸವನ್ನು ಪರಿಗಣನೆಗೆ ತೆಗೆದುಕೊಂಡು ಉತ್ತಮ ಆಡಳಿತ ನೀಡುವ ಭರವಸೆಯನ್ನು ನೀಡಿದರು. ಈ ವೇಳೆ ಸ್ಥಳೀಯ ಕಾರ್ಯಕರ್ತರುಯ ಉಪಸ್ಥಿತರಿದ್ದು, ಈ ಬಾರಿ ಪಕ್ಷೇತರ ಅಭ್ಯರ್ಥಿಗೆ ತಮ್ಮ ಮತವನ್ನು ಹಾಕುವುದಾಗಿ ಘೋಷಣೆ ಮಾಡಿದರು.

LEAVE A REPLY

Please enter your comment!
Please enter your name here