ನರಿಮೊಗರು ಮುಕ್ವೆಯಲ್ಲಿ ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಚಾರ ಸಭೆ

0

ಪುತ್ತೂರು: ನರಿಮೊಗರು ಕಾಂಗ್ರೆಸ್ ಬೂತ್ ಮಟ್ಟದ ಕಾರ್ಯಕರ್ತರ ಸಭೆ ಇಂದು ಮುಕ್ವೆಯಲ್ಲಿ ನಡೆಯಿತು. ಪುತ್ತೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಭಾಗವಹಿಸಿದ್ದ ಈ ಸಭೆಯಲ್ಲಿ ಪಕ್ಷದ ಮಾಜಿ ಶಾಸಕಿ ಶಕುಂತಲಾ ಶೆಟ್ಟಿ, ಹೇಮನಾಥ್ ಶೆಟ್ಟಿ ಕಾವು, ಯಂಗ್‌ ಬ್ರೀಗೆಡ್‌ ಸೇವಾದಳದ ರಾಜ್ಯಾಧ್ಯಕ್ಷ ಜುನೈದ್‌, ಅನ್ವರ್ ಖಾಸಿಂ, ಲ್ಯಾನ್ಸಿ ಮಸ್ಕರೆನಾಸ್, ಶಕೂರ್ ಹಾಜಿ ರೆಂಜಲಾಡಿ ಸೇರಿದಂತೆ ಹಲವರು ಉಸ್ಥಿತರಿದ್ದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಗೆಲುವಿಗಾಗಿ ಶ್ರಮಿಸುವಂತೆ ಕಾರ್ಯಕರ್ತರಿಗೆ ಕರೆ ನೀಡಿದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ನೆರೆದಿದ್ದ ಕಾರ್ಯಕರ್ತರಲ್ಲಿ ಅಭಿಮಾನಿಗಳಲ್ಲಿ ಮತ್ತು ಸಾರ್ವಜನಿಕರಲ್ಲಿ ಮತಯಾಚನೆ ನಡೆಸಿದರು.

LEAVE A REPLY

Please enter your comment!
Please enter your name here