ವಿಧಾನ ಸಭಾ ಚುನಾವಣೆ-ಪುತ್ತೂರು ನಗರ ಕಾಂಗ್ರೆಸ್‌ಗೆ ವಲಯ ಉಸ್ತುವಾರಿಗಳ ನೇಮಕ

0

ಪುತ್ತೂರು: ಕರ್ನಾಟಕ ವಿಧಾನ ಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಪುತ್ತೂರು ವಿಧಾನ ಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದಿಂದ ನಗರ ವಿವಿಧ ವಲಯಗಳಿಗೆ ಐವರು ಉಸ್ತುವಾರಿಗಳನ್ನು ನೇಮಕಗೊಳಿಸಿ ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ ಬಿ ವಿಶ್ವನಾಥ ರೈ ಆದೇಶಿಸಿದ್ದಾರೆ.

ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ರೋಷಣ್ ರೈ ಬನ್ನೂರು, ಉಪಾಧ್ಯಕ್ಷ ಮೌರೀಶ್ ಮಸ್ಕರೇನಸ್, ಯಂಗ್ ಬ್ರಿಗೇಡ್ ಅಧ್ಯಕ್ಷ ರಂಜಿತ್ ಬಂಗೇರ, ನಗರ ಸಭಾ ಸದಸ್ಯ ಮಹಮ್ಮದ್ ರಿಯಾಝ್ ಹಾಗೂ ಸುರೇಶ್ ಪೂಜಾರಿ ಮೊಟ್ಟೆತ್ತಡ್ಕರವರನ್ನು ನಗರ ವಲಯ ಉಸ್ತುವಾರಿಗಳನ್ನಾಗಿ ನೇಮಕಗೊಳಿಸುವಂತೆ ನಗರ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ಆಲಿಯವರ ಶಿಪಾರಸ್ಸಿನಂತೆ ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ ಬಿ ವಿಶ್ವನಾಥ ರೈಯವರು ನೇಮಕಗೊಳಿಸಿ ಆದೇಶಿಸಿದ್ದಾರೆ.

LEAVE A REPLY

Please enter your comment!
Please enter your name here