ಕಾವು:ಬಿಜೆಪಿ ಮಾಡ್ನೂರು ಶಕ್ತಿ ಕೇಂದ್ರದ ಕಾರ್ಯಕರ್ತರ ಸಭೆ-ಮತಯಾಚನೆ

0

‘ಹಿಂದು ಧರ್ಮದ ರಕ್ಷಣೆ ಹಾಗೂ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಬಿಜೆಪಿ ಬೆಂಬಲಿಸಿ’ – ಆಶಾ ತಿಮ್ಮಪ್ಪ ಗೌಡ

ಕಾವು: ಬಿಜೆಪಿ ಹಿಂದುತ್ವದ ಆಧಾರದಲ್ಲಿ ಕೆಲಸ ನಿರ್ವಹಿಸುತ್ತಿದ್ದು, ಹಿಂದೂ ಧರ್ಮದ ರಕ್ಷಣೆ ಹಾಗೂ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಬಿಜೆಪಿಗೆ ಮತ ನೀಡುವಂತೆ ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ವಿನಂತಿಸಿದರು. ಅವರು ಕಾವು ನನ್ಯ ವಾಸುದೇವ ಮುಡಿತ್ತಾಯ ಇವರ ಮನೆಯಲ್ಲಿ ನಡೆದ ಬಿಜೆಪಿ ಮಾಡ್ನೂರು ಶಕ್ತಿ ಕೇಂದ್ರದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.


ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರದ ಸಾಧನೆ ಮತ್ತು ಯೋಜನೆಗಳನ್ನು ಪ್ರತಿ ಮನೆಗೆ ತಲುಪಿಸಬೇಕು -ಸಂಜೀವ ಮಠಂದೂರು
ಪ್ರಧಾನಿ ನರೇಂದ್ರ ಮೋದಿ ಭಾರತವನ್ನು ಸದೃಢ ದೇಶವನ್ನಾಗಿ ಮಾಡಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆ ಹಾಗೂ ಸಾಧನೆಗಳನ್ನು ಹಾಗೂ ಕ್ಷೇತ್ರದಲ್ಲಿ ನಡೆದ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಮುಂದಿಟ್ಟುಕೊಂಡು ಪ್ರತಿ ಮನೆಗೆ ತಿಳಿಸುವ ಕಾರ್ಯದ ಜೊತೆಗೆ ಆಡಳಿತಾತ್ಮಕ ಅನುಭವ ಹೊಂದಿರುವ ಆಶಾ ತಿಮ್ಮಪ್ಪ ಗೌಡ ಇವರನ್ನು ಗೆಲ್ಲಿಸಿ ಕೊಡುವ ಜವಾಬ್ದಾರಿ ನಮ್ಮ ಮೇಲಿದೆ ಎಂದರು.


ಕಾರ್ಯಕ್ರಮದಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ಕಾವು ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ನನ್ಯ ಅಚ್ಚುತ ಮೂಡಿತ್ತಾಯ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಧೀರ್ ಕುಮಾರ್,ಪುತ್ತೂರು ನಗರಸಭಾ ಉಪಾಧ್ಯಕ್ಷೆ ವಿದ್ಯಾಗೌರಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು, ಸಭೆಯಲ್ಲಿ ಬಿಜೆಪಿ ಮಂಡಲದ ಪ್ರಧಾನ ಕಾರ್ಯದರ್ಶಿ ನಿತೀಶ್ ಶಾಂತಿವನ, ಕಾರ್ಯದರ್ಶಿ ಯತೀಂದ್ರ ಕೊಚ್ಚಿ, ಸುನಿಲ್ ದಡ್ಡು, ದ ಕ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಬೂಡಿಯರ್ ರಾಧಾಕೃಷ್ಣ ರೈ, ಮಹಿಳಾ ಮೋರ್ಚಾದ ತ್ರಿವೇಣಿ ಪೆರ್ವೋಡಿ,ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷೆ ಮೀನಾಕ್ಷಿ ಮಂಜುನಾಥ್, ಅರಿಯಡ್ಕ ಗ್ರಾಮ ಪಂಚಾಯತ್ ಅಧ್ಯಕ್ಷೆ ಸೌಮ್ಯ ಬಾಲಸುಬ್ರಹ್ಮಣ್ಯ ಸೇರಿದಂತೆ ,ಮಂಡಲ ಪದಾಧಿಕಾರಿಗಳು,ಬೂತ್ ಅಧ್ಯಕ್ಷ ಕಾರ್ಯದರ್ಶಿ, ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು, ಮಾಡ್ನೂರು ಬಿಜೆಪಿ ಶಕ್ತಿ ಕೇಂದ್ರ ದ ಸಂಚಾಲಕ ಲೋಕೇಶ್ ಚಾಕೋಟೆ ಸ್ವಾಗತಿಸಿ,ವಂದಿಸಿದರು.

LEAVE A REPLY

Please enter your comment!
Please enter your name here