ಕೈಯ್ಯೂರಿನಲ್ಲಿ ನಲ್ಲಿ ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆ

0

ಪುತ್ತೂರು: ಮೇ 10ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಯ ಪುತ್ತೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಕೈಯ್ಯೂರಿನ ದೇವಿ ನಗರದಲ್ಲಿ ಸಾರ್ವಜನಿಕ ಚುನಾವಣಾ ಪ್ರಚಾರ ಸಭೆ ನಡೆಸಿದರು.


ನೂರಾರು ಅಭಿಮಾನಿಗಳು ಹಿತೈಷಿಗಳು ಪಕ್ಷದ ಕಾರ್ಯಕರ್ತರು ಸಾರ್ವಜನಿಕರು ನೆರೆದಿದ್ದ ಈ ಕಾರ್ಯಕ್ರಮದಲ್ಲಿ ಕೈಯ್ಯೂರು ವಲಯ ಕಾಂಗ್ರೆಸ್ ಅಧ್ಯಕ್ಷರಾದ
ಎ ಕೆ ಜಯರಾಮ್ ರೈ, ಕಾವು ಹೇಮನಾಥ ಶೆಟ್ಟಿ, ಇಸಾಕ್ ಸಾಲ್ಮರ, ಅನ್ವರ್ ಖಾಸಿಂ ಸೇರಿದಂತೆ ಪಕ್ಷದ ಹಲವು ಮುಂಚೂಣಿ ನಾಯಕರು ಭಾಗವಹಿಸಿದ್ದರು. ಕೇಂದ್ರ ಮತ್ತು ರಾಜ್ಯ ಸರಕಾರದ ವೈಫಲ್ಯಗಳನ್ನು ಮುಂದಿಟ್ಟ ಹೇಮನಾಥ ಶೆಟ್ಟಿ ಮತ್ತು ಅಶೋಕ್ ಕುಮಾರ್ ರೈ ಕಾಂಗ್ರೆಸ್ ಬೆಂಬಲಿಸುವಂತೆ ಮನವಿ ಮಾಡಿ ಮತಯಾಚನೆ ನಡೆಸಿದರು.

LEAVE A REPLY

Please enter your comment!
Please enter your name here