ಪುತ್ತೂರು: ಕರ್ನಾಟಕ ಪ್ರೌಢ ಶಿಕ್ಷಣ ಇಲಾಖೆಯಿಂದ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಫಲಿತಂಶ ಪ್ರಕಟಗೊಂಡಿದ್ದು, ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯಮಟ್ಟದಲ್ಲಿ ಅತ್ಯುತ್ತಮ ಸಾಧನೆ ಮಾಡಿರುತ್ತಾರೆ.
![](https://puttur.suddinews.com/wp-content/uploads/2023/04/WhatsApp-Image-2023-04-25-at-11.26.43-AM.jpeg)
ವಿಜ್ಞಾನ ವಿಭಾಗದಲ್ಲಿ ಆಶ್ರಯ ಪಿ ಹಾಗೂ ದೀಪ್ತಿ ಲಕ್ಷ್ಮಿ 592 ಅಂಕ ಗಳಿಸಿ ರಾಜ್ಯಕ್ಕೆ5ನೇ ಸ್ಥಾನ ಪಡೆದಿದ್ದು, ತಾಲೂಕಿಗೆ ಪ್ರಥಮ ಸ್ಥಾನಿಯಾಗಿರುತ್ತಾರೆ. ವಾಣಿಜ್ಯ ವಿಭಾಗದಲ್ಲಿ ಆದಿತ್ಯ ನಾರಾಯಣ 595 ಅಂಕ ಗಳಿಸಿ ರಾಜ್ಯಕ್ಕೆ ತೃತೀಯ ಸ್ಥಾನ ಹಾಗೂ ತಾಲೂಕಿಗೆ ಪ್ರಥಮ ಸ್ಥಾನಿಯಾಗಿದ್ಧಾರೆ. ಕಲಾ ವಿಭಾಗದಲ್ಲಿ ಮಂಜುಶ್ರೀ 591 ಅಂಕ ಗಳಿಸಿ ರಾಜ್ಯಕ್ಕೆ ತೃತೀಯ ಹಾಗೂ ಜಿಲ್ಲೆಗೆ ಪ್ರಥಮ ಸ್ಥಾನಿಯಾಗಿದ್ಧಾರೆ. ಎಲ್ಲಾ ಸಾಧಕರನ್ನು ಆಡಳಿತ ಮಂಡಳಿ ಮತ್ತು ಕಾಲೇಜಿನ ವತಿಯಿಂದ ಸನ್ಮಾನಿಸಲಾಯಿತು. ಆಡಳಿತ ಮಂಡಳಿ ಸದಸ್ಯೆ ಹಾಗೂ ಶಿಕ್ಷಣ ತಜ್ಞೆ ಶ್ರೀಮತಿ ವತ್ಸಲಾ ರಾಜ್ನಿ ಸಾಧಕರನ್ನು ಸನ್ಮಾನಿಸಿ ಶುಭ ಹಾರೈಸಿದರು.ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರದ ಶ್ರೀ ಮಹೇಶ್ ನಿಟಿಲಾಪುರ ಮತ್ತು ಉಪನ್ಯಾಸಕರು ಉಪಸ್ಥಿತರಿದ್ಧರು.