ಪುತ್ತೂರಿನ ಖ್ಯಾತನಾಮರ ನಿವಾಸಕ್ಕೆ ಕೇಂದ್ರ ಸಚಿವೆ ಭಾರತಿ ಪವಾರ್ ಭೇಟಿ

0

ಪುತ್ತೂರು: ಭಾರತೀಯ ಜನತಾ ಪಕ್ಷದ ಪುತ್ತೂರು ಕ್ಷೇತ್ರದ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ಮತ್ತು ಕೇಂದ್ರ ಆರೋಗ್ಯ ಮತ್ತು ಸಮಾಜ ಕಲ್ಯಾಣ ಸಚಿವೆ ಭಾರತಿ ಪವಾರ್‌ ಪುತ್ತೂರಿನ ಪ್ರತಿಷ್ಠಿತ ಜಿ ಎಲ್‌ ಸಂಸ್ಥೆಯ ಮಾಲಕರಾದ ಬಲರಾಂ ಆಚಾರ್ಯ ಮತ್ತು ಮುಳಿಯ ಜ್ಯುವೆಲ್ಲರ್ಸ್‌ ಸಂಸ್ಥೆಯ ಮಾಲಕರು ಮತ್ತು ಪುತ್ತೂರು ಮಹಾಲಿಂಗೇಶ್ವರ ದೇವಾಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮುಳಿಯ ಕೇಶವ ಪ್ರಸಾದ್‌ ಅವರ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದರು.

ಈ ಸಂದರ್ಭದಲ್ಲಿ ಶಾಸಕ ಸಂಜೀವ ಮಠಂದೂರು, ಮಾಜಿ ಶಾಸಕಿ ಮಲ್ಲಿಕಾ ಪ್ರಸಾದ್‌, ಆರ್‌ ಸಿ ನಾರಾಯಣ್‌ , ಮುಳಿಯ ಕೃಷ್ಣ ಪ್ರಸಾದ್‌ , ಸುಧನ್ವ ಆಚಾರ್ಯ, ರಾಜಿ ಬಲರಾಂ ಆಚಾರ್ಯ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here