ಮಲ್ಲಿಕಾರ್ಜುನ ಖರ್ಗೆಯಿಂದ ಸುಳ್ಯದಲ್ಲಿ ಬೃಹತ್ ಚುನಾವಣಾ ಪ್ರಚಾರ ಸಭೆ – ಅಶೋಕ್ ಕುಮಾರ್ ರೈ ಉಪಸ್ಥಿತಿ

0

ಪುತ್ತೂರು : ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಜಿ ಕೃಷ್ಣಪ್ಪ ಪರವಾಗಿ ಇಂದು ಸುಳ್ಯದಲ್ಲಿ ಬೃಹತ್ ಚುನಾವಣಾ ಪ್ರಚಾರ ಸಭೆ ನಡೆಯಿತು. ಅಖಿಲ ಭಾರತ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾಗವಹಿಸಿದ್ದ ಈ ಕಾರ್ಯಕ್ರಮದಲ್ಲಿ ಸುಮಾರು 3000ಕ್ಕೂ ಅಧಿಕ ಜನರು ಭಾಗವಹಿಸಿದ್ದರು.

ದೇಶದ ಮತ್ತು ರಾಜ್ಯದ ಹಿತ ದೃಷ್ಟಿಯಿಂದ ಕಾಂಗ್ರೆಸ್ ಗೆ ಮತ ನೀಡುವಂತೆ ಖರ್ಗೆ ಕರೆ ನೀಡಿದರು. ಈ ಸಂದರ್ಭದಲ್ಲಿ ಪುತ್ತೂರಿನ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ, ಬೆಳ್ತಂಗಡಿ ಅಭ್ಯರ್ಥಿ ರಕ್ಷಿತ್ ಶಿವರಾಮ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮತ್ತು ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್, ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ, ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ ಜಯರಾಮ್, ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ, ಮಾಜಿ ಶಾಸಕಿ ಶಕುಂತಲಾ ಶೆಟ್ಟಿ, ಧನಂಜಯ ಅಡ್ಪಂಗಾಯ, ಟಿ.ಎಂ ಶಹೀದ್ ಸೇರಿದಂತೆ ಹಲವು ಮುಂಚೂಣಿ ನಾಯಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here