ಗೋಳಿತ್ತೊಟ್ಟು: ಅನಾರೋಗ್ಯದಿಂದ ವಿದ್ಯಾರ್ಥಿನಿ ನಿಧನ

0

ನೆಲ್ಯಾಡಿ: ಗೋಳಿತ್ತೊಟ್ಟು ಗ್ರಾಮದ ಜನತಾ ಕಾಲೋನಿ ನಿವಾಸಿ ದಿ.ಸುಂದರ ಪೂಜಾರಿ ಹಾಗೂ ಲೀಲಾವತಿ ದಂಪತಿ ಪುತ್ರಿ, ಮಂಗಳೂರು ವಿವಿ ನೆಲ್ಯಾಡಿ ಘಟಕ ಕಾಲೇಜಿನಲ್ಲಿ ಪ್ರಥಮ ಬಿ.ಎ.ವಿದ್ಯಾರ್ಥಿನಿ ಮಮತಾ(18ವ) ಎಂಬವರು ಅನಾರೋಗ್ಯದಿಂದ ಎ.25ರಂದು ಬೆಳಿಗ್ಗೆ ಪುತ್ತೂರಿನ ಸರಕಾರಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಮಮತಾ ಅವರು ಕಳೆದ ಕೆಲ ಸಮಯಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು ಎ.25ರಂದು ಬೆಳಿಗ್ಗೆ ಅವರ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡಿತ್ತು. ಮನೆಯವರು ನೆಲ್ಯಾಡಿ ಸರಕಾರಿ ಆಸ್ಪತ್ರೆಗೆ ಕರೆದೊಯ್ದು ಬಳಿಕ ಅಲ್ಲಿನ ವೈದ್ಯರ ಸೂಚನೆಯಂತೆ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿನ ಸರಕಾರಿ ಆಸ್ಪತ್ರೆಗೆ ಕರೆತಂದಿದ್ದರು. ಆದರೆ ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟರು ಎಂದು ವರದಿಯಾಗಿದೆ. ಮೃತ ಮಮತಾ ಅವರು ತಾಯಿ ಲೀಲಾವತಿ, ಸಹೋದರರಾದ ಬೇಬಿ ಪೂಜಾರಿ, ರವಿಪೂಜಾರಿ, ನಾಗೇಶ್ ಪೂಜಾರಿ ಅವರನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here