ವಂಚನೆ ಆರೋಪ- ಹರೀಶ್‌ ಪೂಂಜ ದಂಪತಿಗಳ ವಿರುದ್ದ ದೂರು ದಾಖಲು

0

ಉಪ್ಪಿನಂಗಡಿ : 34 ನೆಕ್ಕಿಲಾಡಿ ಗ್ರಾಮ ಪಂಚಾಯತ್‌ ಮಾಜಿ ಸದಸ್ಯೆ ಸತ್ಯವತಿ ಮತ್ತವರ ಪತಿ ಹರೀಶ್‌ ಪೂಂಜಾ ವಿರುದ್ದ ವಂಚನೆ ಆರೋಪದಡಿ ಉಪ್ಪಿನಂಗಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಣ್ಣಿ ಆದಿ ದ್ರಾವಿಡ ಎಂಬವರ ಪತ್ನಿ ಲೀಲಾ ಎಂಬವರು ದೂರು ದಾಖಲಿಸಿದ್ದು ಜಾತಿ ನಿಂದನೆ ಮತ್ತು ಜೀವ ಬೆದರಿಕೆ ಹಾಕಿರುವುದಾಗಿ ಆರೋಪಿಸಿದ್ದಾರೆ. ನನ್ನ ಅತ್ತೆ ಬೊಮ್ಮಿಯವರ ಹೆಸರಿನಲ್ಲಿ ಗಂಗಾ ಕಲ್ಯಾಣ ಯೋಜನೆಯಡಿ ಮಂಜೂರಾದ ಕೊಳವೆ ಬಾವಿಯನ್ನು ಸ್ವಂತಕ್ಕೆ ಉಪಯೋಗಿಸಿಕೊಂಡದಲ್ಲದೆ ನನ್ನ ಮುಗ್ದತೆಯನ್ನು ಬಳಸಿಕೊಂಡು ಹಣಕಾಸು ಸಂಸ್ಥೆಯೊಂದರಿಂದ 30ಸಾವಿರ ಪಡೆದು ಅದನ್ನು ಅವರ ಸ್ವಂತಕ್ಕೆ ಬಳಸಿಕೊಂಡಿದ್ದಾರೆ. ಹಣ ಮರುಪಾವತಿ ಬಗ್ಗೆ ಹೇಳಿದಾಗ ಅದನ್ನು ಕಟ್ಟದೆ ವಂಚನೆ ಮಾಡಿದ್ದಾರೆ. ಈ ಕುರಿತು ಪೊಲೀಸರಿಗೆ ಮತ್ತು ಕಂದಾಯ ಇಲಾಖೆಗೆ ದೂರು ನೀಡಿ ವಿಚಾರಣೆ ನಡೆಯುತ್ತಿದೆ. ದೂರು ನೀಡಿದ ಹಿನ್ನೆಲೆಯಲ್ಲಿ ಜಾತಿ ನಿಂದನೆ ಮಾಡಿ ಜೀವಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ಹೇಳಲಾಗಿದೆ. ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

LEAVE A REPLY

Please enter your comment!
Please enter your name here