ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲರಿಂದ ಪ್ರಣಾಳಿಕೆ ಬಿಡುಗಡೆ

0

ಹಿಂದುತ್ವದ ರಕ್ಷಣೆ ಜೊತೆಗೆ ಭ್ರಷ್ಟಾಚಾರ ರಹಿತ, ಜನಸ್ನೇಹಿ ಅಡಳಿತ ನೀಡುವ ಭರವಸೆಯ ಜೊತೆಗೆ 31 ವಿಷಯಾಧಾರಿತ ಪ್ರಣಾಳಿಕೆ

ಪುತ್ತೂರು: ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲರಿಂದ ಹಿಂದುತ್ವದ ರಕ್ಷಣೆ ಜೊತೆಗೆ ಭ್ರಷ್ಟಾಚಾರ ರಹಿತ, ಜನಸ್ನೇಹಿ ಅಡಳಿತ ನೀಡುವ ಭರವಸೆಯ ಜೊತೆಗೆ 31 ವಿಷಯಾಧಾರಿತ ಪ್ರಣಾಳಿಕೆ ಎ.26ರಂದು ಬಿಡುಗಡೆಗೊಳಿಸಲಾಯಿತು.


ಪುತ್ತೂರು ದರ್ಬೆ ಸುಭದ್ರ ಕಲ್ಯಾಣ ಮಂಟಪದ ಬಳಿ ಪ್ರಣಾಳಿಕೆ ಬಿಡುಗಡೆಗೊಳಿಸಲಾಯಿತು. ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ, ಸುನಿಲ್ ಬೋರ್ಕರ್, ಭಾಸ್ಕರ್ ಆಚಾರ್ಯ ಇಂದಾರು, , ಸೇಡಿಯಾಪು ಜನಾರ್ದನ ಭಟ್, ಡಾ.ಗಣೇಶ್ ಪ್ರಸಾದ್ ಮುದ್ರಾಜೆ, ಪ್ರಸನ್ನ ಕುಮಾರ್ ಮಾರ್ತಾ, ಸ್ನೇಹ ಸಿಲ್ಕ್ ನ ಸತೀಶ್ ಕುಮಾರ್, ನಿವೃತ್ತ ತಹಸೀಲ್ದಾರ್ ಮೋನಪ್ಪ ಪುರುಷ, ನಿವೃತ್ತ ಸೇನಾನಿ ಚಂದಪ್ಪ ಮೂಲ್ಯ, ಕುಶಾಲಪ್ಪ ಗೌಡ ಬಳಕ್ಕ, ರಾಜಶೇಖರ್ ಉದ್ಯಮಿ ಬನ್ನೂರು, ನಗರ ಯುವ ಮೋರ್ಚಾದ ಮಾಜಿ ಅಧ್ಯಕ್ಷ ಪ್ರವೀಣ್ ಭಂಡಾರಿ, ಮರದಮುತ್ತು ಕೌಡಿಚ್ಚಾರ್, ಪಡ್ನೂರು ಶ್ರೀರಾಮ ಯುವಕ ಮಂಡಲದ ಲೋಕೇಶ್, ಅರುಣ್ ಇಂಡಸ್ಟ್ರೀಸ್ ಅರುಣ್ ಕುಮಾರ್‌ ರೈ ಡಿಂಬ್ರಿ, ಸಾಯಿಲಕ್ಷ್ಮೀ ಇಂಡಸ್ಟ್ರೀಸ್ ಮಾಲಕ ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು.
ಪ್ರಣಾಳಿಕೆ ಸಿದ್ದಪಡಿಸುವಲ್ಲಿ ಸತೀಶ್ ರೈ‌ ನೀರ್ಪಾಡಿ, ಪ್ರಮೋದ್ ರೈ, ಮನ್ನಥ ಶೆಟ್ಟಿ ಸಹಕರಿಸಿದರು

ವಿಡಿಯೋಗಾಗಿ ಇಲ್ಲಿ ಕ್ಲಿಕ್‌ ಮಾಡಿ

LEAVE A REPLY

Please enter your comment!
Please enter your name here