ಉಪ್ಪಿನಂಗಡಿಯಲ್ಲಿ ಜೆಡಿಎಸ್‌ ಅಭ್ಯರ್ಥಿ ಸಮಾಲೋಚನೆ ಸಭೆ

0

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿ ದಿವ್ಯ ಪ್ರಭಾ ಗೌಡ ಇಂದು ಉಪ್ಪಿನಂಗಡಿಗೆ ಭೇಟಿ ನೀಡಿ ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಿದರು. ಚುನಾವಣೆಗೆ ಸಂಬಂಧ ಪಟ್ಟಂತೆ ಕಾರ್ಯತಂತ್ರಗಳ ಬಗ್ಗೆ ಮತ್ತು ಬೂತ್ ಮಟ್ಟದಲ್ಲಿ ಪ್ರಚಾರ ನಡೆಸುವ ಬಗ್ಗೆ ಮಾತುಕತೆ ನಡೆಸಲಾಯಿತು.ಕಾರ್ಯಕರ್ತರನ್ನು ಹುರಿದುಂಬಿಸಿ ಮಾತನಾಡಿದ ಕ್ಷೇತ್ರದ ಅಭ್ಯರ್ಥಿ ದಿವ್ಯ ಪ್ರಭಾ ಗೌಡ ಮುಂದಿನ 14 ದಿನ ಪಕ್ಷದ ಗೆಲುವುಗಾಗಿ ದುಡಿಯುವ ಉತ್ಸಾಹ ನಿಮ್ಮದಾಗಬೇಕು ಎಂದರು. ಈ ಸಂದರ್ಭದಲ್ಲಿ ಪಕ್ಷದ ಪದಾಧಿಕಾರಿಗಳಾದ ಶ್ರೀಮತಿ ಜೋಹರ, ಜಯರಾಜ್ ಅಮೀನ್, ಜಲೀಲ್ ಕೊಯಿಲ, ಅಜೀಜ್ ಪೆರಿಯಡ್ಕ ಸೇರಿದಂತೆ ಹಲವು ಕಾರ್ಯಕರ್ತರು, ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here