ವರುಣನ ಕೃಪೆಗಾಗಿ ವಿ.ಹಿಂ. ಪ. ವತಿಯಿಂದ ಸಾಮೂಹಿಕ ಪ್ರಾರ್ಥನೆ

0

ಕಡಬ: ವಿ.ಹಿಂ.ಪ.ವತಿಯಿಂದ ಮಳೆಗಾಗಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ,ಕೇಪು ಶ್ರೀ ಲಕ್ಷ್ಮಿಜನಾರ್ಧನ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.


ಪ್ರಸ್ತುತ ವರ್ಷದಲ್ಲಿ ವಿಪರೀತ ಸೆಕೆ ಹಾಗೂ ಕುಡಿಯುವ ನೀರಿನ ಅಭಾವ ತಲೆದೋರಿ ಜನ ಜೀವನ ಅಸ್ತವ್ಯಸ್ತವಾಗುವ ಸಾಧ್ಯತೆ ಹಿನ್ನಲೆಯಲ್ಲಿ ಜಿಲ್ಲೆಯ ಎಲ್ಲಾ ದೇವಸ್ಥಾನ, ದೈವಸ್ಥಾನಗಳಲ್ಲಿ ವಿಶೇಷ ಪ್ರಾರ್ಥನೆ, ಪೂಜೆಗಳನ್ನು ಮಾಡುವಂತೆ ಸೂಚಿಸಿದ ಹಿನ್ನೆಲೆಯಲ್ಲಿ ಕಡಬ ಪ್ರಖಂಡ ವಿ.ಹಿಂ.ಪ. ವತಿಯಿಂದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಹಾಗೂ ಕೇಪು ಶ್ರೀ ಲಕ್ಷ್ಮಿ ಜನಾರ್ಧನ ದೇವಸ್ಥಾನದಲ್ಲಿ ಕಾರ್ಯಕರ್ತರು ವಿಶೇಷ ಪ್ರಾರ್ಥನೆ ಪೂಜೆ ಸಲ್ಲಿಸಿದರು. ಈ ಸಂಧರ್ಭದಲ್ಲಿ ವಿಹಿಂಪ ಕಡಬ ಪ್ರಖಂಡ ಉಪಾಧ್ಯಕ್ಷ ಅಶೋಕ್ ಆಚಾರ್ಯ, ಸುಬ್ರಹ್ಮಣ್ಯ ವಿಹಿಂಪ ಅಧ್ಯಕ್ಷ ರಾಧಾಕೃಷ್ಣ ಅರುವಾರ ಪ್ರಮುಖರಾದ ಶ್ರೀಕೃಷ್ಣ ಭಟ್, ಪ್ರಸನ್ನ ಹೆಬ್ಬಾರ್ , ವೇಣುಗೋಪಾಲ್ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here