ಬೆಳ್ಳಿಪ್ಪಾಡಿ: ಹರಿವೆ ಪದಾರ್ಥ ಸೇವಿಸಿದ್ದ ಮೂವರು ಅಸ್ವಸ್ಥ-ಮಂಗಳೂರು ಆಸ್ಪತ್ರೆಗೆ ದಾಖಲು

0

ಪುತ್ತೂರು: ಮನೆಯಲ್ಲಿಯೇ ಬೆಳೆದ ಹರಿವೆಯ ಪದಾರ್ಥ ಸೇವಿಸಿ ಮೂವರು ಅಸ್ವಸ್ಥಗೊಂಡ ಘಟನೆ ಬೆಳ್ಳಿಪ್ಪಾಡಿ ಕೈಲಾಜೆಯಲ್ಲಿ ನಡೆದಿದೆ. ಅಸ್ವಸ್ಥಗೊಂಡವರು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಬೆಳ್ಳಿಪ್ಪಾಡಿಯ ಕೈಲಾಜೆ ಕೊರಗಪ್ಪ ಗೌಡ, ಅವರ ಪತ್ನಿ ಲಲಿತಾ ಹಾಗೂ ಅವರ ಮನೆಗೆ ಕೆಲಸಕ್ಕೆ ಬಂದಿದ್ದ ರಮೇಶ್ ಅಡ್ಕರಗುರಿ ಎಂಬವರು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾದವರು. ಕೈಲಾಜೆ ಕೊರಗಪ್ಪ ಗೌಡರ ಮನೆಯಲ್ಲಿ ಮಧ್ಯಾಹ್ನದ ಊಟಕ್ಕೆ ತಮ್ಮ ಮನೆಯಲ್ಲಿಯೇ ಬೆಳೆದ ಹರಿವೆಯ ಪದಾರ್ಥ ಮಾಡಿದ್ದರು. ಎಂದಿನಂತೆ ಎಲ್ಲರೂ ಮಧ್ಯಾಹ್ನ ಊಟ ಸೇವಿಸಿದ್ದರು. ಸಂಜೆಯಾಗುತ್ತಲೇ ಪದಾರ್ಥ ಸೇವಿಸಿದ್ದ ಮೂವರ ಆರೋಗ್ಯದಲ್ಲಿ ಏರುಪೇರು ಉಂಟಾಗಿ ತೀವ್ರವಾಗಿ ಅಸ್ವಸ್ಥಗೊಂಡಿದ್ದ ಮೂವರನ್ನು ಪುತ್ತೂರು ಆದರ್ಶ ಆಸ್ಪತ್ರೆಗೆ ಕರೆ ತಂದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

LEAVE A REPLY

Please enter your comment!
Please enter your name here