ಎ.30: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನೂತನ 30ನೇ ಮಾಣಿ ಶಾಖೆಯ ಉದ್ಘಾಟನಾ ಸಮಾರಂಭ

0

ಪುತ್ತೂರು : ಮಂಗಳೂರು ನಗರದ ಪಡೀಲ್‌ನಲ್ಲಿ ಸ್ವಂತ ಆಡಳಿತ ಕಟ್ಟಡವನ್ನು ಹೊಂದಿರುವ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಾದ್ಯಂತ 29 ಶಾಖೆಗಳನ್ನು ಹೊಂದಿದ್ದು, ಇದೀಗ ತನ್ನ ನೂತನ 30 ನೇ ಮಾಣಿ ಶಾಖೆಯು ಎ.ಆರ್. ಕಾಂಪ್ಲೆಕ್ಸ್, ಕೊಡಾಜೆ, ಮಾಣಿ-ಪುತ್ತೂರು ಮುಖ್ಯ ರಸ್ತೆ, ಬಂಟ್ವಾಳ ತಾಲೂಕು ಇಲ್ಲಿ ಎಪ್ರಿಲ್ 30ರಂದು ರವಿವಾರ ಬೆಳಿಗ್ಗೆ ೧೧.೨೦ ಗಂಟೆಗೆ ಸಾರ್ವಜನಿಕ ಸೇವೆಗಾಗಿ ಲೋಕಾರ್ಪಣೆಗೊಳ್ಳಲಿದೆ.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್ ವಹಿಸಲಿದ್ದು,ಮಾಣಿ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘದ ಗೌರವಾಧ್ಯಕ್ಷ ಈಶ್ವರ ಪೂಜಾರಿ ನೂತನ ಶಾಖೆಯ ಉದ್ಘಾಟನೆ ಮಾಡಲಿದ್ದಾರೆ. ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here