ಮೇ 1: ಬಿಜೆಪಿ ಎಸ್.ಸಿ ಮೋರ್ಚಾದ ಸಮಾವೇಶ

0

ಪುತ್ತೂರು: ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ಎಸ್ ಸಿ ಮೋರ್ಚಾದ ಸಮಾವೇಶ ಮೇ 1 ಕ್ಕೆ ತೆಂಕಿಲ ದರ್ಶನ್ ಹಾಲ್ ನಲ್ಲಿ ನಡೆಯಲಿದೆ ಎಂದು ಎಸ್ ಸಿ ಮೋರ್ಚಾ ಜಿಲ್ಲಾ ಸಮಿತಿ ಸದಸ್ಯ ಅಣ್ಣಪ್ಪ ಕಾರೆಕ್ಕಾಡು ತಿಳಿಸಿದ್ದಾರೆ.


ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಬಿಜೆಪಿ ಆಡಳಿತ ಹಲವಾರು ಜನಪರ ಅಭಿವೃದ್ದಿ ಕಾರ್ಯಕ್ರಮಗಳನ್ನು ನಮಗೆ ನೀಡಿದೆ. ರಾಜ್ಯ ಬಿಜೆಪಿ ಸರಕಾರ ಪರಿಶಿಷ್ಟ ಜಾತಿ ಸಮುದಾಯಕ್ಕೆ ಗೃಹ ನಿರ್ಮಾಣದ ಮೊತ್ತವನ್ನು ರೂ.2.10 ಲಕ್ಷ ರೂ ಗೆ ಏರಿಸಿದೆ.ಡಾ.ಬಿ.ಆರ್ ಅಂಬೇಡ್ಕರ್ ವಸತಿ ಯೋಜನೆ ನೀಡಿದೆ. 75 ಯುನಿಟ್ ವಿದ್ಯುತ್ ಉಚಿತ ನೀಡಿದೆ.ಹೀಗೆ ಹಲವು ಯೋಜನೆ ಸೌಲಭ್ಯವನ್ನು ನೀಡಿದ ಬಿಜೆಪಿ ಸರಕಾರವನ್ನು ಮತ್ತೊಮ್ಮೆ ಗೆಲ್ಲಿಸಬೇಕಾಗಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಜಿ.ಪಂ ಮಾಜಿ ಅದ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಬಿಜೆಪಿ ಎಸ್ ಸಿ ಮೋರ್ಚಾದ ಗ್ರಾಮಾಂತರ ಮಂಡಲದ ಕಾರ್ಯದರ್ಶಿ ಲೋಹಿತ್ ಅಮ್ಚಿನಡ್ಕ, ಸದಸ್ಯ ಕೊರಗಪ್ಪ ಈಶ್ವರಮಂಗಲ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here