ಪುಣ್ಚತ್ತಾರು ಶ್ರೀ ವಿಷ್ಣುಮೂರ್ತಿ ದೈವಸ್ಥಾನ ಮತ್ತು ಶ್ರೀ ಕಾಳಿಕಾಂಬ ದೇವಿ ದೇವಸ್ಥಾನದ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಆಮಂತ್ರಣ ಅನಾವರಣ

0

ಕಾಣಿಯೂರು: ಪುಣ್ಚತ್ತಾರು ವಿಷ್ಣುಪುರ ಕರಿಮಜಲು ಶ್ರೀ ವಿಷ್ಣುಮೂರ್ತಿ ದೈವಸ್ಥಾನ ಮತ್ತು ಶ್ರೀ ಕಾಳಿಕಾಂಬ ದೇವಿ ದೇವಸ್ಥಾನ ಮತ್ತು ಪರಿವಾರ ದೈವಗಳ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವವು ಜೂ 11ರಿಂದ ಜೂ 13ರವರೆಗೆ ನಡೆಯಲಿದ್ದು, ಕಾರ್ಯಕ್ರಮದ ಆಮಂತ್ರಣ ಬಿಡುಗಡೆಯು ಏ 29ರಂದು ಪುಣ್ಚತ್ತಾರು ಕ್ಷೇತ್ರದಲ್ಲಿ ನಡೆಯಿತು.


ಈ ಸಂದರ್ಭದಲ್ಲಿ ಆಡಳಿತ ಮೊಕ್ತೇಸರರು, ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷ ವೆಂಕಟ್ರಮಣ ಆಚಾರ್ಯ ಕರಿಮಜಲು, ಮೊಕ್ತೇಸರರಾದ ಜನಾರ್ದನ ಆಚಾರ್ಯ, ಕೃಷ್ಣ ಆಚಾರ್ಯ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾದ ಶೇಷಪ್ಪ ಗೌಡ ಬೆದ್ರಂಗಳ,ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷರಾದ ಡಾ. ದೇವಿಪ್ರಸಾದ್ ಕಾನತ್ತೂರ್, ಪ್ರಧಾನ ಕಾರ್ಯದರ್ಶಿ ಬಾಲಕೃಷ್ಣ ರೈ ಕಾಸ್ಪಾಡಿಗುತ್ತು, ಬ್ರಹ್ಮಕಲಶೋತ್ಸವ ಸಮಿತಿ ಉಪಾಧ್ಯಕ್ಷರಾದ ಪುಟ್ಟಣ್ಣ ಗೌಡ ಪೈಕ, ನಾಗೇಶ್ ರೈ ಮಾಳ, ಜೀರ್ಣೋದ್ಧಾರ ಸಮಿತಿಯ ಗೌರವ ಸಲಹೆಗಾರರಾದ ಗಣೇಶ್ ಉದನಡ್ಕ, ಸಂಜೀವ ರೈ ಪೈಕ, ಉಪಾಧ್ಯಕ್ಷ ಪ್ರದೀಪ್ ಬೊಬ್ಬೆಕೇರಿ, ಸೀತಾರಾಮ ಗೌಡ ಮರಕ್ಕಡ, ವಿಶ್ವನಾಥ ರೈ ಮಾಳ, ಕಾರ್ಯದರ್ಶಿ ಮೋನಪ್ಪ ಬಂಡಾಜೆ, ಕೋಶಾಧಿಕಾರಿ ಭವಿಷ್ ಕರಿಮಜಲು,ರಾಜೇಶ್ ಕರಿಮಜಲು, ಜತೆ ಕಾರ್ಯದರ್ಶಿ ಮೋಹನ್ ಕರಿಮಜಲು, ಪ್ರಮೋದ್ ಉಪ್ಪಡ್ಕ, ರಾಕೇಶ್ಕ ರಿಮಜಲು,ಸೇವಾಪ್ರತಿನಿಧಿ ಮನೋರಮಾ ನಾವೂರು, ಗಣೇಶ್ ಭಟ್ ಕಾರಡ್ಕ, ಲೋಲಕ್ಷ ಬೆಟ್ಟಪುರ, ಧರ್ಮೇಂದ್ರ ಗೌಡ ಕಟ್ಟತ್ತಾರು, ಹರೀಶ್ ಪೈಕ, ಗಿರಿಯಪ್ಪ ಗೌಡ ಬಿರ್ನೆಲು, ರವೀಂದ್ರ ಬೆಂಗಡ್ಕ, ಗಣಪಯ್ಯ ನಳಿಯಾರು,ಜನಾರ್ದನ ಮಲೆಕೆರ್ಚಿ, ವಾಚಣ್ಣ ಗೌಡ ನಳಿಯಾರು ಮತ್ತೀತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here