ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಮನೆ ಮನೆ ಸಂಪರ್ಕ ಅಭಿಯಾನ

0


ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಅಶಾ ತಿಮ್ಮಪ್ಪ ಅವರ ಪರವಾಗಿ ಮತಯಾಚನೆ ಪ್ರಚಾರ ಕಾರ್ಯಕ್ಕೆ ಬಿಜೆಪಿ ವೇಗ ನೀಡಿದ್ದು, ಎ.30 ರಂದು ವಿಧಾನಸಭಾ ಕ್ಷೇತ್ರದ ಎಲ್ಲಾ 220 ಬೂತ್‌ಗಳಲ್ಲೂ ಏಕಕಾಲದಲ್ಲಿ ಮನೆ ಮನೆ ಸಂಪರ್ಕ ಅಭಿಯಾನ ನಡೆಸಿದ್ದಾರೆ.


ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಅವರು ಬೆಳಿಗ್ಗೆ ವಿಟ್ಲ ಮುಡ್ನೂರು ಶಕ್ತಿ ಕೇಂದ್ರದಿಂದ ಮನೆ ಮನೆ ಸಂಪರ್ಕ ಅಭಿಯಾನಕ್ಕೆ ಚಾಲನೆ ನೀಡಿದರು. ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ಶಾಸಕ ಸಂಜೀವ ಮಠಂದೂರು, ನಗರಸಭೆ ಅಧ್ಯಕ್ಷ ಕೆ.ಜೀವಂಧರ್ ಜೈನ್, ಬಿಜೆಪಿ ಗ್ರಾಮಾಂರ ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ನಗರ ಮಂಡಲದ ಅಧ್ಯಕ್ಷ ಪಿ.ಜಿ.ಜಗನ್ನಿವಾಸ ರಾವ್, ಚಂದ್ರಶೇಖರ್ ರಾವ್ ಬಪ್ಪಳಿಗೆ, ಆರ್.ಸಿ.ನಾರಾಯಣ ಸಹಿತ ಸಾವಿರಾರು ಮಂದಿ ಪ್ರಮುಖರು ಮತ್ತು ಕಾರ್ಯಕರ್ತರು ತಮ್ಮ ತಮ್ಮ ಬೂತ್‌ಗಳಲ್ಲಿ ಮನೆ ಮನೆ ಸಂಪರ್ಕ ಅಭಿಯಾನ ನಡೆಸಿದರು. ಪಡ್ಡಾಯೂರು ಬೂತ್ 62, ಬಪ್ಪಳಿಗೆ ಬೂತ್ 120, 121, ಬಲ್ನಾಡು ಬೂತ್ 107 ಸಹಿತ ಹಲವಾರು ಕಡೆಯಲ್ಲಿ ಅಭಿಯಾನ ನಡೆಯಿತು.

LEAVE A REPLY

Please enter your comment!
Please enter your name here