ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ವೆಂಕಟೇಶ್ ಪ್ರಸಾದ್ ರವರಿಗೆ ಬೆಳ್ಳಿ ಪದಕ

0

ಪುತ್ತೂರು: ಮಾಸ್ಟರ್ಸ್ ಅಥ್ಲೆಟಿಕ್ಸ್, ತಲಶ್ಶೇರಿ ಇದರ ಆಶ್ರಯದಲ್ಲಿ ಕೇರಳದ ತಲಶ್ಶೇರಿಯ ಜಸ್ಟಿಸ್ ವಿ.ಆರ್. ಕೃಷ್ಣಯ್ಯರ್ ಕ್ರೀಡಾಂಗಣದಲ್ಲಿ ನಡೆದ ಮುಕ್ತ ಹಿರಿಯರ ಕ್ರೀಡಾಕೂಟದಲ್ಲಿ ಪುತ್ತೂರು ತಾಲೂಕಿನ ದರ್ಬೆತ್ತಡ್ಕ ವೆಂಕಟೇಶ್ ಪ್ರಸಾದ್ ಇವರು 45ರ ವಯೋಮಾನದ ಉದ್ದಜಿಗಿತದಲ್ಲಿ ಬೆಳ್ಳಿ ಪದಕ ಹಾಗೂ ಎತ್ತರ ಜಿಗಿತದಲ್ಲಿ ಕಂಚಿನ ಪದಕ ವಿಜೇತರಾಗಿದ್ದಾರೆ.

ಇವರು ದರ್ಬೆತ್ತಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಪೆರ್ನಾಜೆ ಶ್ರೀ ಸೀತಾರಾಘವ ಕಾಲೇಜು ಹಾಗೂ ಪುತ್ತೂರು ಫಿಲೋಮಿನಾ ಕಾಲೇಜಿನ ಹಿರಿಯ ವಿದ್ಯಾರ್ಥಿಯಾಗಿದ್ದು, ಪ್ರಸ್ತುತ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ, ತೆಂಕಿಲ ಪುತ್ತೂರು ಇಲ್ಲಿ ಸಂಸ್ಕೃತ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

LEAVE A REPLY

Please enter your comment!
Please enter your name here