ದೋಳ್ಪಾಡಿ-ಬಿಜೆಪಿ ಕಾರ್ಯಕರ್ತರ ಸಭೆ, ಮತಯಾಚನೆ

0

ಕಾಣಿಯೂರು: ಸುಳ್ಯ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಪರ ಮಾತಯಾಚನೆ ಮತ್ತು ಕಾರ್ಯಕರ್ತರ ಸಭೆ ಸುಳ್ಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ದೋಳ್ಪಾಡಿಯಲ್ಲಿ ನಡೆಯಿತು.

ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ, ಸುಳ್ಯ ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ, ಸುಳ್ಯ ವಿಧಾನಸಭಾ ಕ್ಷೇತ್ರದ ಪ್ರಭಾರಿ ಕುಶಾಲಪ್ಪ ಪೂವಾಜೆ, ಪ್ರಮುಖ್ ವಿನಯ ಮುಳುಗಾಡು, ಮಂಡಲ ಕಾರ್ಯದರ್ಶಿ ಇಂದಿರಾ ಬಿ. ಕೆ, ಮಂಡಲ ಸವಣೂರು ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಗಣೇಶ್ ಉದನಡ್ಕ, ಪ್ರಮುಖರಾದ ಕೃಷ್ಣ ಶೆಟ್ಟಿ ಕಡಬ, ಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಅನೂಪ್ ಆಳ್ವ, ಪರಿವಾರ ಸಂಘಟನೆಯ ಪ್ರಮುಖ್ ಸುಪ್ರಿತ್ ರೈ ಖಂಡಿಗ, ಕಾಣಿಯೂರು ಗ್ರಾ.ಪಂ.ಸದಸ್ಯರಾದ ದೇವಿಪ್ರಸಾದ್ ದೋಳ್ಪಾಡಿ, ಲೋಕಯ್ಯ ಪರವ ದೋಳ್ಪಾಡಿ, ತಾರಾನಾಥ ಇಡ್ಯಡ್ಕ,ಅಂಬಾಕ್ಷಿ ಕೂರೇಲು, ಬೂತ್ ಸಮಿತಿ ಕಾರ್ಯದರ್ಶಿ ಮೋಹನ್ ಕಟ್ಟ, ಮುರುಳ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷೆ ಕುಸುಮ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು. ಮಂಡಲ ಸಮಿತಿ ಸದಸ್ಯ ಶಿವರಾಮ ರೈ ಪಿಜಕ್ಕಳ ಸ್ವಾಗತಿಸಿ, ಬೂತ್ ಸಮಿತಿ ಅಧ್ಯಕ್ಷ ಬಾಲಕೃಷ್ಣ ಗೌಡ ಇಡ್ಯಡ್ಕ ವಂದಿಸಿದರು.

LEAVE A REPLY

Please enter your comment!
Please enter your name here