ಕಡಮಜಲು ಸುಭಾಷ್ ರೈಯವರಿಂದ ತಿಂಗಳಾಡಿ ಮಾರಿಯಮ್ಮ ದೇವಿ ದೇವಸ್ಥಾನಕ್ಕೆ ಮೆಟ್ಟಿಲು ಸಮರ್ಪಣೆ

0

ಪುತ್ತೂರು: ಕೆದಂಬಾಡಿ ಗ್ರಾಮದ ತಿಂಗಳಾಡಿ ಗಾಂಧಿನಗರದಲ್ಲಿರುವ ಅತ್ಯಂತ ಕಾರಣಿಕತೆಯನ್ನು ಹೊಂದಿರುವ ಶ್ರೀ ಮಾರಿಯಮ್ಮ ದೇವಿ ದೇವಸ್ಥಾನಕ್ಕೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ಪ್ರಗತಿಪರ ಕೃಷಿಕ ಕಡಮಜಲು ಸುಭಾಷ್ ರೈಯವರು ಮೆಟ್ಟಿಲುಗಳನ್ನು ಸೇವಾರೂಪದಲ್ಲಿ ನೀಡಿದರು.

ಸುಮಾರು 40 ಸಾವಿರ ರೂ.ವೆಚ್ಚದಲ್ಲಿ ನಿರ್ಮಾಣಗೊಂಡ ಮೆಟ್ಟಿಲುಗಳ ಉದ್ಘಾಟನೆಯು ಏ.26 ರಂದು ಶ್ರೀ ದೇವಿಯ ಮಾರಿಪೂಜೆ ಮಹೋತ್ಸವದ ಸಂದರ್ಭದಲ್ಲಿ ನಡೆಯಿತು. ತೆಂಗಿನ ಕಾಯಿ ಒಡೆಯುವ ಮೂಲಕ ಮೆಟ್ಟಿಲುಗಳನ್ನು ದೇವಸ್ಥಾನಕ್ಕೆ ಸಮರ್ಪಣೆ ಮಾಡಲಾಯಿತು.


ಈ ಸಂದರ್ಭದಲ್ಲಿ ಸೇವಾಕರ್ತೃ ಕಡಮಜಲು ಸುಭಾಷ್ ರೈ, ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಮಾದಿಗ ಸಹಿತ ಶ್ರೀ ಮಾರಿಯಮ್ಮ ಸೇವಾ ಸಮಿತಿಯ ಪದಾಧಿಕಾರಿಗಳು, ಊರಪರವೂರ ಭಕ್ತಾಧಿಗಳು ಉಪಸ್ಥಿತರಿದ್ದರು.


ಈ ಸಂದರ್ಭದಲ್ಲಿ ಸೇವಾಕರ್ತೃ ಕಡಮಜಲು ಸುಭಾಷ್ ರೈ, ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಮಾದಿಗ ಸಹಿತ ಶ್ರೀ ಮಾರಿಯಮ್ಮ ಸೇವಾ ಸಮಿತಿಯ ಪದಾಧಿಕಾರಿಗಳು, ಊರಪರವೂರ ಭಕ್ತಾಧಿಗಳು ಉಪಸ್ಥಿತರಿದ್ದರು.
ಚಿತ್ರ: ಸಮರ್ಪಣೆ

LEAVE A REPLY

Please enter your comment!
Please enter your name here