ಪಾಣಾಜೆ ಸುಬೋಧ ಪ್ರೌಢಶಾಲೆಯಲ್ಲಿ 1994-1995 ನೇ ಸಾಲಿನ ಹಿರಿಯ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ಕಾರ್ಯಕ್ರಮ.

0

ಪಾಣಾಜೆ : ಪಾಣಾಜೆ ಸುಬೋಧ ಪ್ರೌಢಶಾಲೆಯ  1994-95 ನೇ ಸಾಲಿನ ಹಿರಿಯ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ  ಕಾರ್ಯಕ್ರಮ ಪಾಣಾಜೆ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಉಪೇಂದ್ರ ಬಲ್ಯಾಯ ದೇವಸ್ಯ ಇವರ ಅಧ್ಯಕ್ಷತೆಯಲ್ಲಿ ಏ.30 ರಂದು ಸಂಭ್ರಮ ಸಡಗರದಿಂದ ಶಾಲೆಯಲ್ಲಿ ಜರುಗಿತು. ದೇಶದ ನಾನಾ ಕಡೆಗಳಲ್ಲಿ ತಮ್ಮ ತಮ್ಮ ವೃತ್ತಿಗಳಲ್ಲಿ ನಿರತರಾಗಿರುವ  ಹಿರಿಯ ವಿದ್ಯಾರ್ಥಿಗಳು, ತಾವು ವಿದ್ಯಾರ್ಜನೆ ಮಾಡಿದ ಶಾಲೆಯಲ್ಲಿ ಒಟ್ಟಿಗೆ ಸೇರಿ ತಮಗೆ ಕಲಿಸಿದ ಗುರುಗಳನ್ನು ಸನ್ಮಾನಿಸಿ ಅವರ ಹಿತವಚನಗಳನ್ನು ಕೇಳಿ ಖುಷಿ ಪಟ್ಟರು.

ಸಮಾರಂಭದ ಅಧ್ಯಕ್ಷರು, ಸಂಚಾಲಕರು ಮತ್ತು ಶಿಕ್ಷಕರು ಜೊತೆಯಲ್ಲಿ ದೀಪ ಪ್ರಜ್ವಲನೆ ಮಾಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ತಮ್ಮ ಗುರುಗಳಾದ ಪಿಲಿಂಗಲ್ಲು ಕೃಷ್ಣ ಭಟ್, ಮೊಳಕ್ಕಾಲು ಶ್ರೀಕೃಷ್ಣ ಭಟ್, ಸುಬ್ರಹ್ಮಣ್ಯ ಶಾಸ್ತ್ರಿ, ನಾರಾಯಣ ಎಸ್ ಕೆ, ಪುರಂದರ ಎಂ ಜಿ, ಪ್ರತಿಭಾ ಬೊಳ್ಳಿಂಬಳ, ಲಲಿತಾ ಹೆಗ್ಗಡೆ ಮತ್ತು ವಿದ್ಯಾವರ್ಧಕ ಸಂಘದ ಅಧ್ಯಕ್ಷ  ಉಪೇಂದ್ರ ಬಲ್ಯಾಯ ಹಾಗೂ ಶಾಲಾ ಸಂಚಾಲಕರಾದ ಗಿಳಿಯಾಲು ಮಹಾಬಲೇಶ್ವರ ಭಟ್, ಇವರನ್ನು ಶಾಲು ಹೊದಿಸಿ, ಫಲಪುಷ್ಪ, ಸ್ಮರಣಿಕೆ ನೀಡಿ ಗೌರವಿಸಲಾಯಿತು. ಗುರುಗಳು ಹಿತವಚನಗಳನ್ನು ಹೇಳಿ ವಿದ್ಯಾರ್ಥಿಗಳಿಗೆ ಶುಭವನ್ನು ಹಾರೈಸಿದರು. ಹಿರಿಯ ವಿದ್ಯಾರ್ಥಿಗಳಾದ  ಸವಿತಾ, ಮಹೇಶ್, ಬಾಲಕೃಷ್ಣ ಭಟ್ ಖಂಡೇರಿ  ಶಾಲೆಯಲ್ಲಿ ಕಳೆದ ದಿನಗಳನ್ನು ನೆನೆಯುತ್ತಾ ತಮ್ಮ ಅನುಭವಗಳನ್ನು ಹಂಚಿಕೊಳ್ಳುತ್ತಾ ತಮ್ಮ ಶಿಕ್ಷಕರು ಮತ್ತು ಸಹಪಾಠಿಗಳೊಡನೆ ಸಂಭ್ರಮಿಸಿದರು.

ಶಾಲಾ ಸಂಚಾಲಕರು ಹಿರಿಯ ವಿದ್ಯಾರ್ಥಿಗಳಿಗೆ ಶಾಲೆಯ ಪ್ರಕೃತ ಸ್ಥಿತಿಯನ್ನು ವಿವರಿಸಿ ಹಿರಿಯ ವಿದ್ಯಾರ್ಥಿಗಳ ಸರ್ವ ವಿಧದ ಸಹಕಾರವನ್ನು ಕೋರಿದರು. ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ರವೀಂದ್ರ ಭಂಡಾರಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿ  ಸ್ವಾಗತಿಸಿದರು. ಹಿರಿಯ ವಿದ್ಯಾರ್ಥಿಗಳಾದ ಸವಿತಾ, ಶೈಲಜಾ ಪ್ರಾರ್ಥಿಸಿ,  ಮಹೇಶ್ ವಂದಿಸಿದರು. ಹಿರಿಯ ವಿದ್ಯಾರ್ಥಿ ಬಾಲಕೃಷ್ಣ ಭಟ್ ಖಂಡೇರಿ ಕಾರ್ಯಕ್ರಮ ನಿರೂಪಿಸಿದರು. ಬಿ.ಬಿ ಕ್ರಿಯೇಶನ್ಸ್ ನ ಹರೀಶ್ ಮತ್ತು ಪ್ರದೀಪ್ ಸಹಕರಿಸಿದರು.

LEAVE A REPLY

Please enter your comment!
Please enter your name here