ಒಕ್ಕೆತ್ತೂರಿನಲ್ಲಿ ಕಾಂಗ್ರೆಸ್ ಸೇರ್ಪಡೆಗೊಂಡ ಜೆಡಿಎಸ್ ಮತ್ತು ಎಸ್ ಡಿಪಿಐ ಕಾರ್ಯಕರ್ತರು

0

ಪುತ್ತೂರು: ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆ ಮೇ 10ರಂದು ನಡೆಯಲಿದ್ದು, ಪಕ್ಷಗಳು ಬಿರುಸಿನ ಪ್ರಚಾರದಲ್ಲಿ ತೊಡಗಿದೆ.

ಪುತ್ತೂರು ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಅಶೋಕ್ ಕುಮಾರ್ ರೈ ವಿಟ್ಲ ನಗರ, ನೆಲ್ಲಿಗುಡ್ಡೆ, ಒಕ್ಕೆತ್ತೂರು, ಸೆರಾಜೆ, ಚಂದಳಿಕೆ, ನೆಕ್ಕರೆ ಮುಂತಾದೆಡೆ ಬಿರುಸಿನ ಪ್ರಚಾರ ನಡೆಸಿದ್ದಾರೆ. ಒಕ್ಕೆತ್ತೂರಿನಲ್ಲಿ ನಡೆದ ಸಭೆಯಲ್ಲಿ ಜೆಡಿಎಸ್ ಕಾರ್ಯಕರ್ತ ಸುಲೈಮಾನ್ ಎಸ್ ಡಿಪಿಐ ಕಾರ್ಯಕರ್ತರುಗಳಾದ ಅನ್ಸರ್‌ ಹನೀಫ್‌, ಅಬ್ದುಲ್‌ ಖಾದರ್‌, ಮಾಜಿ ಶಾಸಕಿ ಶಕುಂತಲಾ ಶೆಟ್ಟಿ, ಅಶೋಕ್ ಕುಮಾರ್ ರೈ ಸಮ್ಮುಖದಲ್ಲಿ ಕಾಂಗ್ರೆಸ್ಸಿಗೆ ಸೇರ್ಪಡೆಗೊಂಡರು. ಪಕ್ಷದ ಧ್ವಜ ನೀಡಿ ಅವರನ್ನು ಸ್ವಾಗತಿಸಲಾಯಿತು.

LEAVE A REPLY

Please enter your comment!
Please enter your name here