ನರೇಂದ್ರ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಕ್ಷೇತ್ರದಲ್ಲಿರುವ ಅಪರಿಮಿತ ಅವಕಾಶಗಳ ಉಪನ್ಯಾಸ

0

ಪುತ್ತೂರು: ವೃತ್ತಿ, ಉದ್ಯೋಗ ನೀಡುವ ಶಿಕ್ಷಣವನ್ನು ಅರಸಿ ಸೂಕ್ತವಾದುದನ್ನು ಆಯ್ಕೆ ಮಾಡುವ ಪರ್ವಕಾಲವಿದು. ಅವಕಾಶಗಳು ಕೈಬೀಸಿ ಕರೆಯುತ್ತಿದೆ. ಆದರೆ ಶಿಕ್ಷಣಾವಕಾಶಗಳ ಮಾಹಿತಿ ಕೊರತೆಯಾಗಬಾರದು. ಸರಿಯಾದ ಸಮಯದಲ್ಲಿ ಸರಿಯಾದ ಶಿಕ್ಷಣ ದೊರಕಿದಾಗ ಒಬ್ಬ ಸಾಮಾನ್ಯ ವ್ಯಕ್ತಿಯು ಅಸಾಮಾನ್ಯ ವ್ಯಕ್ತಿಯಾಗಿ ರೂಪುಗೊಳ್ಳಲು ಸಾಧ್ಯ. ಇಂತಹ ಸಮಯದಲ್ಲಿ ವಿದ್ಯಾರ್ಥಿಗಳ ಆಸಕ್ತಿಗೆ ಅನುಗುಣವಾಗಿ, ಅವಶ್ಯಕತೆಗೆ ಅನುಕೂಲವಾಗುವಂತಹ ಶಿಕ್ಷಣದ ಅವಕಾಶಗಳನ್ನು ಆಯ್ಕೆಮಾಡಬೇಕು ಎಂದು ವಿವೇಕಾನಂದ ಕಾಲೇಜ್ ಆಫ್ ಆರ್ಟ್ಸ್, ಸೈನ್ಸ್ ಮತ್ತು ಕಾಮರ್ಸ್ ಭೌತಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಶ್ರೀಶ ಭಟ್ ಹೇಳಿದರು.

ನರೇಂದ್ರ ಪ.ಪೂ.ಕಾಲೇಜಿನಲ್ಲಿ ಹೈಸ್ಕೂಲು ವಿದ್ಯಾರ್ಥಿಗಳಿಗಾಗಿ ನಡೆಯುತ್ತಿರುವ ವ್ಯಕ್ತಿತ್ವ ವಿಕಸನ ಶಿಬಿರ ತರಂಗ ೨೦೨೩ ಇದರ ಎರಡನೇ ದಿನದ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾದ ಡಾ. ಶ್ರೀಶ ಭಟ್ ಶಿಕ್ಷಣ ಕ್ಷೇತ್ರದಲ್ಲಿರುವ ಅಪರಿಮಿತ ಅವಕಾಶಗಳ ಎಂಬ ವಿಷಯದ ಕುರಿತು ವಿದ್ಯಾರ್ಥಿಗಳೊಡನೆ ನಡೆದ ಸಂವಾದ ಕಾರ್‍ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಶಿಬಿರದ ಕೊನೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ(ಸಿಬಿಎಸ್‌ಇ)ಯ ಚಿತ್ರಕಲಾ ಶಿಕ್ಷಕ ರಮೇಶ್ ವಿದ್ಯಾರ್ಥಿಗಳಿಗೆ ಕ್ಲೇ ಮಾಡೆಲಿಂಗ್‌ನ ತಯಾರಿಯ ಬಗ್ಗೆ ತಿಳಿಸಿ ವಿವಿಧ ಚಟುವಟಿಕೆಗಳ ಮೂಲಕ ಬಹುವರ್ಣದ ಮಾದರಿಗಳನ್ನು ತಯಾರಿಸಿದರು. ವಿದ್ಯಾರ್ಥಿಗಳಿಗೆ ಆಕರ್ಷಕ ಮೋಜಿನ ಆಟಗಳನ್ನು ಕಾಲೇಜಿನ ವಿದ್ಯಾರ್ಥಿಗಳು ಆಡಿಸಿದರು. ವಿಜೇತರಿಗೆ ಪ್ರೋತ್ಸಾಹಕ ಬಹುಮಾನವನ್ನು ನೀಡಲಾಯಿತು.


ಪುತ್ತೂರು, ಬಂಟ್ವಾಳ, ಬೆಳ್ತಂಗಡಿ ತಾಲೂಕಿನ ವಿವಿಧ ಭಾಗಗಳಿಂದ ಸುಮಾರು ೫೦ಕ್ಕೂ ಹೆಚ್ಚು ವಿದ್ಯಾರ್ಥಿಗಳು ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು. ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಜನನಿ ಸ್ವಾಗತಿಸಿ, ವಂದಿಸಿದರು.

LEAVE A REPLY

Please enter your comment!
Please enter your name here