ಅರುಣ್ ಕುಮಾರ್ ಪುತ್ತಿಲ ಪರ ಬ್ಯಾಟ್ ಬೀಸಿದ ಮುತಾಲಿಕ್

0

ಪುತ್ತೂರು: ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್‌ರವರು ಪುತ್ತೂರಿನ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲರವರಿಗೆ ಬೆಂಬಲ ಸೂಚಿಸಿದ್ದಾರೆ. ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ ಮಾತನಾಡಿದ ಅವರು ಬಿಜೆಪಿ ಹಿಂದುತ್ವದ ವಿಚಾರಧಾರೆ ಇಟ್ಟುಕೊಂಡ ಏಕೈಕ ಪಕ್ಷವಾಗಿದೆ. ಬಿಜೆಪಿ ಒಳಗಡೆ ಇರುವಂತವರು ಭ್ರಷ್ಟರಾಗಿದ್ದಾರೆ. ಒಲೈಕೆ ರಾಜಕಾರಣ ಮಾಡುತ್ತಿದ್ದಾರೆ. ಇವರಿಗೆ ಪುತ್ತೂರಿನ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲರವರು ಮೊದಲು ಹೋರಾಟಗಾರರಾಗಿ ಕಂಡಿದ್ದಾರೆ. ಈಗ ಹೋರಾಟಗಾರನೇ ಅಲ್ಲ ಎಂದು ಹೇಳುತ್ತಿದ್ದಾರೆ. ಅವರು ಹಿಂದುತ್ವದ ನಾಯಕನಾಗಿದ್ದಾರೆ. ಪುತ್ತೂರಿನಲ್ಲಿ ಅವರು ಗೆದ್ದೇ ಗೆಲ್ಲುತ್ತಾರೆ ಅವರನ್ನು ನಾನು ಬೆಂಬಲಿಸುತ್ತೇನೆ ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here