ವೀರಮಂಗಲ ಶ್ರೀ ಮಹಾವಿಷ್ಣು ಸೇವಾ ಸಮಿತಿ ಪದಾಧಿಕಾರಿಗಳ ಆಯ್ಕೆಅಧ್ಯಕ್ಷ ಗೋಪಾಲಕೃಷ್ಣ, ಕಾರ್ಯದರ್ಶಿ ಹರೀಶ್ ಆಚಾರ್ಯ

0

ಪುತ್ತೂರು: ವೀರಮಂಗಲ ಶ್ರೀ ಮಹಾವಿಷ್ಣು ಸೇವಾ ಸಮಿತಿಯ ನೂತನ ಅಧ್ಯಕ್ಷರಾಗಿ ಗೋಪಾಲಕೃಷ್ಣ ವೀರಮಂಗಲ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಹರೀಶ್ ಆಚಾರ್ಯರವರು ಆಯ್ಕೆಯಾಗಿದ್ದಾರೆ.
ಇತ್ತೀಚೆಗೆ ವೀರಮಂಗಲ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ನಡೆದ ಸಮಿತಿಯ ವಾರ್ಷಿಕ ಮಹಾಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಸಮಿತಿ ಕಾರ್ಯಾಧ್ಯಕ್ಷರಾಗಿ ವಸಂತ ಗೌಡ ಸೇರಾಜೆ, ಉಪಾಧ್ಯಕ್ಷರಾಗಿ ಉಮೇಶ ಕೆ., ಜತೆ ಕಾರ್ಯದರ್ಶಿಯಾಗಿ ಸುಂದರ ಕುಲಾಲ್, ಮುಖ್ಯ ಸದಸ್ಯರಾಗಿ ವಿಶ್ವನಾಥ ಗೌಡ, ನಿರಂಜನ್ ಕುಲಾಲ್, ವಿಜಯ ಕುಮಾರ್, ಲಕ್ಷ್ಮಣ ಗೌಡ ಹಾಗೂ ಪುನೀತ್ ಎಸ್.ರವರನ್ನು ಆಯ್ಕೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ನೂತನ ಪದಾಧಿಕಾರಿಗಳ ಪದಗ್ರಹಣ ನೆರವೇರಿತು. ವೀರಮಂಗಲ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವಿಶ್ವಸ್ಥ ಮಂಡಳಿಯ ಅಧ್ಯಕ್ಷ ಉಮೇಶ ಕೋಡಿಬೈಲು, ಸಮಿತಿ ನಿಕಟಪೂರ್ವ ಅಧ್ಯಕ್ಷ ಲಕ್ಷ್ಮಣ ಗೌಡ ವೇದಿಕೆಯಲ್ಲಿ ಉಪಸ್ಥಿತರಿದ್ದರು. ನಿರಂಜನ ಕುಲಾಲ್ ಕಾರ್ಯಕ್ರಮ ನಿರೂಪಿಸಿ, ಹರ್ಷ ಗುತ್ತು ವಂದಿಸಿದರು.

LEAVE A REPLY

Please enter your comment!
Please enter your name here