ಶಾಂತಿನಗರ ಮಹಾವಿಷ್ಣು ದೇವಸ್ಥಾನದ ಪ್ರತಿಷ್ಠಾ ವಾರ್ಷಿಕ ಉತ್ಸವಕ್ಕೆ ಹೊರೆಕಾಣಿಕೆ ಸಮರ್ಪಣೆ

0

ಪುತ್ತೂರು: 34 ನೆಕ್ಕಿಲಾಡಿ ಗ್ರಾಮದ ಶಾಂತಿನಗರ ಶ್ರೀ ಮಹಾವಿಷ್ಣು ದೇವಳದಲ್ಲಿ ಮೇ 7ರಂದು ನಡೆಯಲಿರುವ ಪ್ರತಿಷ್ಠಾ ವಾರ್ಷಿಕ ಉತ್ಸವಕ್ಕೆ ಮೇ 6ರಂದು ಹಸಿರು ಹೊರೆಕಾಣಿಕೆ ಸಮರ್ಪಣೆಯಾಯಿತು.

ಚಿತ್ರ: ಅಚಲ್ ಉಬರಡ್ಕ


ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಮೇ 7ರಂದು ಶ್ರೀ ಮಹಾವಿಷ್ಣು, ಶ್ರೀ ಮಹಾಗಣಪತಿ, ನಾಗದೇವರುಗಳು ಹಾಗೂ ಶ್ರೀ ರಕ್ತೇಶ್ವರಿ, ಮಹಿಷಂದಾಯ, ಪಂಜುರ್ಲಿ, ಗುಳಿಗ ದೈವಗಳು ಹಾಗೂ ವೃಕ್ಷರಾಜ ಅಶ್ವತ್ಥ ಪ್ರತಿಷ್ಠಾ ವಾರ್ಷಿಕ ಮಹೋತ್ಸವ ಮತ್ತು ರಾತ್ರಿ ಶ್ರೀ ದೇವರಿಗೆ ರಂಗಪೂಜೆ ನಡೆಯಲಿದೆ.


ಮೇ.6ರಂದು ಬೆಳಿಗ್ಗೆ ಗಂ.8.25ಕ್ಕೆ ನಿತ್ಯ ಮಹಾಪೂಜೆ ನಡೆಯಿತು. ಮಧ್ಯಾಹ್ನ ಶಾಂತಿನಗರ ಶ್ರೀ ಸತ್ಯನಾರಾಯಣ ಪೂಜಾ ಮೈದಾನದಿಂದ ಶ್ರೀದೇವರಿಗೆ ಮೆರವಣಿಗೆ ಮೂಲಕ ಹೊರೆಕಾಣಿಕೆ ಸಮರ್ಪಣೆಯಾಯಿತು. ದೇವಳದ ಆಡಳಿತ ಮೊಕ್ತೇಸರ ಯು.ಜಿ.ರಾಧ ಮತ್ತು ಮೊಕ್ತೇಸರರು ಹಸಿರು ಹೊರೆಕಾಣಿಕೆ ಸ್ವೀಕರಿಸಿದರು. ಬಳಿಕ ತುಲಾಭಾರ ಸೇವೆ, ಮಹಾಪೂಜೆ, ಪ್ರಸಾದ ವಿತರಣೆ, ಬಳಿಕ ಅನ್ನಸಂತರ್ಪಣೆ ನಡೆಯಲಿದೆ.


ಮೇ.7ರಂದು ಬೆಳಿಗ್ಗೆ ನಿತ್ಯ ಮಹಾಪೂಜೆ, ಶ್ರೀ ಗಣಪತಿ ಹವನ, ಕಲಶಪೂಜೆ, ಕಲಶಾಭಿಷೇಕ, ಮಧ್ಯಾಹ್ನ ಶ್ರೀ ದೇವರಿಗೆ ಮಹಾಪೂಜೆ, ಪ್ರಸಾದ ವಿತರಣೆ ಅನ್ನ ಸಂತರ್ಪಣೆ ನಡೆಯಲಿದೆ. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ ಗಂ.10 ರಿಂದ 12:30ರವರೆಗೆ ವಿದುಷಿ ಶ್ಯಾಮಲ ನಾಗರಾಜ ಭಟ್ ಕುಕ್ಕಿಲ ಮತ್ತು ಬಳಗ ಶೃತಿಲಯ ಕ್ಲಾಸಿಕಲ್ಸ್ ಮಡಂತ್ಯಾರು ಇವರಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ ನಡೆಯಲಿದೆ. ಅಪರಾಹ್ನದಿಂದ ವಿವಿಧ ಭಜನಾ ತಂಡಗಳಿಂದ ಭಜನಾ ಸೇವೆ, ರಾತ್ರಿ ಶ್ರೀದೇವರಿಗೆ ರಂಗಪೂಜೆ, ಪ್ರಸಾದ ವಿತರಣೆ, ಅನ್ನ ಪ್ರಸಾದ ವಿತರಣೆ ನಡೆಯಲಿದೆ. ಆಡಳಿತ ಮೊಕ್ತೇಸರ ಯು.ಜಿ ರಾಧಾ ಅಧ್ಯಕ್ಷತೆಯಲ್ಲಿ ನಡೆಯುವ ಧಾರ್ಮಿಕ ಸಭೆಯಲ್ಲಿ ಶ್ರೀ ರಾಮಕುಂಜೇಶ್ವರ ಪ.ಪೂ ಕಾಲೇಜಿನ ಉಪನ್ಯಾಸಕ ಚೇತನ್ ಮೊಗ್ರಾಲ್ ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ. ರಾತ್ರಿ ಗಂ.9:30ರಿಂದ ಯಕ್ಷಗಾನ ನರಕಾಸುರ ಮೋಕ್ಷ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here