![](https://puttur.suddinews.com/wp-content/uploads/2024/06/Imperial_Manjunatheshwara_-GL-Acharya.gif)
ಪುತ್ತೂರು: ಮೇ 10ರಂದು ನಡೆಯಲಿರುವ ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಪುತ್ತೂರು ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಅಶೋಕ್ ಕುಮಾರ್ ರೈ ಕಲ್ಲಪದವಿ ಕಾಲೋನಿಯಲ್ಲಿ ಮತಯಾಚನೆ ನಡೆಸಿದರು. ಈ ಸಂದರ್ಭದಲ್ಲಿ ಪಕ್ಷದ ಸ್ಥಳೀಯ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.
![](https://puttur.suddinews.com/wp-content/uploads/2023/05/c0aff68e-5f95-436f-8b75-09ab157671ba.jpg)
ಇದೇ ವೇಳೆ ಪಾಣಾಜೆ ಗ್ರಾಮದ ಬಿಜೆಪಿ ಮುಂದಾಳು ಬಾಬು ಕಲ್ಲಪದವು ಅಶೋಕ್ ರೈ ನೇತೃತ್ವದಲ್ಲಿ ಕಾಂಗ್ರೆಸ್ ಸೇರ್ಪಡೆಯಾದರು. ಈ ಸಂದರ್ಭದಲ್ಲಿ ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ ಬಿ ವಿಶ್ವನಾಥ ರೈ ಮುರಳೀಧರ ರೈ ಮಠಂತಬೆಟ್ಟು, ಕೃಷ್ಣ ಪ್ರಸಾದ್ ಆಳ್ವ , ಅಮಲ ರಾಮಚಂದ್ರ ಮತ್ತಿತರರು ಉಪಸ್ಥತರಿದ್ದರು.
![](https://puttur.suddinews.com/wp-content/uploads/2023/05/3a1438ec-366c-4faf-a40c-6a0c3b8549b9.jpg)