ಮೇ 14 ಕ್ಕೆ ಮಂಗಳೂರು ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಪುತ್ತೂರಿನಿಂದ ಹೊರೆಕಾಣಿಕೆ ಸಮರ್ಪಣೆ

0

ಹೊರೆಕಾಣಿಕೆ ಮೆರವಣಿಗೆಯಲ್ಲಿ ಎಲ್ಲಾ ಸಮಾಜಬಾಂಧವರು ಭಾಗವಹಿಸುವಂತೆ ಕುಲಾಲ ಸಂಘದಿಂದ ವಿನಂತಿ

ಪುತ್ತೂರು: ಮಂಗಳೂರು ಮೂಡಬಿದರೆಯ ರಾಷ್ಟ್ರೀಯ ಹೆದ್ದಾರಿಗೆ ತಾಗಿಕೊಂಡು ಕುಲಶೇಖರದಲ್ಲಿರುವ ಶ್ರೀ ವೀರನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಮೇ 14 ಕ್ಕೆ ಪುತ್ತೂರಿನಿಂದ ಹೊರೆಕಾಣಿಕೆ ಸಮರ್ಪಣೆ ಮೆರವಣಿಗೆ ನಡೆಯಲಿದ್ದು, ಎಲ್ಲಾ ಸಮಾಜ ಬಾಂಧವರು ಭಾಗವಹಿಸುವಂತೆ ಕುಲಾಲ ಸಮಾಜ ಸೇವಾ ಸಂಘದ ಅಧ್ಯಕ್ಷ ನವೀನ್ ಕುಲಾಲ್ ಅವರು ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.

ಮಂಗಳೂರು ಪದವು ಗ್ರಾಮದ ಕುಲಶೇಖರದಲ್ಲಿರುವ ಇತಿಹಾಸ ಪ್ರಸಿದ್ಧ ಶ್ರೀ ವೀರನಾರಾಯಣ ಕ್ಷೇತ್ರವು ಸುಮಾರು 800 ವರ್ಷಗಳ ಪುರಾತನ ಇತಿಹಾಸವುಳ್ಳ ದೇವಾಲಯ. ಈ ಕ್ಷೇತ್ರವು ವಿಷ್ಣು ಸ್ವರೂಪಿ ಶ್ರೀ ವೀರನಾರಾಯಣ ದೇವರ ಸಾನಿಧ್ಯವಾಗಿದ್ದು, ಇದೀಗ ಜೀರ್ಣೋದ್ದಾರಗೊಂಡು ಮೇ 14 ರಿಂದ 25 ರ ತನಕ ಬ್ರಹ್ಮಕಲಶೋತ್ಸವ ನಡೆಯಲಿದೆ. ಈ ನಿಟ್ಟಿನಲ್ಲಿ ಮೇ 14 ರಂದು ಹೊರೆಕಾಣಿಕೆ ಸಮರ್ಪಣೆ ಮೆರವಣಿಗೆ ನಡೆಯಲಿದ್ದು, ಅಂದು ಪುತ್ತೂರಿನಿಂದ ಹೊರೆಕಾಣಿಕೆ ಮೆರವಣಿಗೆ ನಡೆಯಲಿದೆ. ಮಧ್ಯಾಹ್ನ ಗಂಟೆ 12 ಕ್ಕೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರು ಗದ್ದೆಯಿಂದ ಹೊರೆಕಾಣಿಕೆ ಮೆರವಣಿಗೆಗೆ ಚಾಲನೆ ನಿಡಲಾಗುವುದು.

ಈ ಸಂದರ್ಭ ಮಡಿಕೇರಿ, ಸುಳ್ಯದಿಂದ ಬರುವ ಹೊರೆಕಾಣಿಕೆ ಮೆರವಣಿಗೆ ಪುತ್ತೂರು ತಾಲೂಕಿನ ಹೊರೆಕಾಣಿಕೆ ಮೆರವಣಿಗೆ ಜೊತೆ ಸೇರಲಿದೆ. ಇಲ್ಲಿಂದ ಜೊತೆಯಾಗಿ ಮಂಗಳೂರಿಗೆ ತೆರಳುವುದು ಎಂದು ಅವರು ಹೇಳಿದರು. ಎಲ್ಲಾ ಸಮಾಜದವರು ಹೊರೆಕಾಣಿಕೆಯ ಮೆರವಣಿಗೆಯಲ್ಲಿ ಭಾಗವಹಿಸುವಂತೆ ಅವರು ವಿನಂತಿಸಿದರು. ಹೊರೆಕಾಣಿಕೆ ಪುತ್ತೂರು ಸಮಿತಿ ಸಂಚಾಲಕ ಡಾ. ಚಂದ್ರಶೇಖರ್, ಸಹಸಂಚಾಲಕರಾದ ಯಶವಂತ ಪಿ ಬಿ, ಜನಾರ್ದನ ಸಿಟಿಗುಡ್ಡೆ, ಸಂಘದ ಕಾರ್ಯದರ್ಶಿ ಜನಾರ್ದನ ಸಾರ್ಯ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here