5 ವರ್ಷಗಳ ಅಭಿವೃದ್ಧಿ ಕಾರ್ಯ, ಶಾಂತಿ, ಸೌಹಾರ್ದಯುತ ಬಂಟ್ವಾಳ ನಿರ್ಮಾಣ ಬಿಜೆಪಿ ಗೆಲುವಿಗೆ ಕಾರಣ : ರಾಜೇಶ್ ನಾಯ್ಕ್ ಉಳಿಪ್ಪಾಡಿ

0

ವಿಟ್ಲ: ಕಳೆದ 5 ವರ್ಷಗಳ ಅಭಿವೃದ್ಧಿ ಕಾರ್ಯ, ಶಾಂತಿ, ಸೌಹಾರ್ದಯುತ ಬಂಟ್ವಾಳ ನಿರ್ಮಾಣ ಹಾಗೂ ಶ್ರದ್ಧೆ, ನಿಷ್ಠೆಯಿಂದ ದುಡಿದ ಪರಿಣಾಮ ಈ ಭಾರಿಯ ಬಿಜೆಪಿ ಗೆಲುವಿಗೆ ಪ್ರಮುಖ ಕಾರಣ ಎಂದು ಬಂಟ್ವಾಳ ವಿಧಾನಸಭಾ ಕ್ಷೇತ್ರದ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿರವರು ಹೇಳಿದರು.


ಅವರು ಗೆಲುವು ಸಾಧಿಸಿದ ಬಳಿಕ ಬಂಟ್ವಾಳ ಬಿಜೆಪಿ ಕಚೇರಿಗೆ ಭೇಟಿ ನೀಡಿ ಸುದ್ದಿಗಾರರೊಂದಿಗೆ ಮಾತನಾಡಿದರು.
ವಿರೋಧ ಪಕ್ಷದಲ್ಲಿದ್ದುಕೊಂಡು ಕೆಲಸ ಮಾಡಬೇಕಾದ ಸ್ಥಿತಿ ಇದ್ದು, ಸಿಕ್ಕ ಅವಕಾಶಗಳನ್ನು ಉಪಯೋಗಿಸಿಕೊಂಡು ಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ.


ಈ ಭಾರಿ ವಿರೋಧ ಪಕ್ಷದಲ್ಲಿದ್ದು, ಆಡಳಿತ ಪಕ್ಷದಲ್ಲಿದ್ದರೆ ಹಿಂದಿಗಿಂತ ಹೆಚ್ಚಿನ ಅಭಿವೃದ್ಧಿ ಮಾಡುವುದಕ್ಕೆ ಅವಕಾಶವಾಗುತ್ತಿತ್ತು. ಆದರೂ ಗರಿಷ್ಠ ಪ್ರಯತ್ನ ಮಾಡಿ ಅನುದಾನ ತಂದು ಅಭಿವೃದ್ಧಿ ಕಾರ್ಯ ಮಾಡಲಿದ್ದೇನೆ. ಬಂಟ್ವಾಳದಲ್ಲಿ ಬಿಜೆಪಿಯಿಂದ 2ನೇ ಬಾರಿಗೆ ಗೆದ್ದ ಮೊದಲ ಶಾಸಕನಾಗಿರುವುದಕ್ಕೆ ಹೆಚ್ಚು ಖುಶಿ ಇದೆ ಎಂದರು.

LEAVE A REPLY

Please enter your comment!
Please enter your name here