ರಾಜ್ಯದಲ್ಲಿ ಕಾಂಗ್ರೆಸ್‌ಗೆ ಬಹುಮತ: ರಾಮಕುಂಜ, ಕೊಯಿಲದಲ್ಲಿ ಕಾರ್ಯಕರ್ತರ ಸಂಭ್ರಮಾಚರಣೆ

0

ರಾಮಕುಂಜ: ಕರ್ನಾಟಕ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 136 ಸ್ಥಾನಗಳಲ್ಲಿ ಗೆಲುವು ಸಾಧಿಸಿ ಸ್ಪಷ್ಟ ಬಹುಮತ ಪಡೆದುಕೊಂಡ ಹಿನ್ನೆಲೆಯಲ್ಲಿ ರಾಮಕುಂಜ, ಕೊಯಿಲದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಪಟಾಕಿ ಸಿಡಿಸಿ, ಕಾಂಗ್ರೆಸ್ ಬಾವುಟ ಹಿಡಿದು ಸಂಭ್ರಮಾಚರಣೆ ಮಾಡಿದರು.


ಗೋಳಿತ್ತಡಿ, ಕೊಯಿಲ, ರಾಮಕುಂಜ ಜಂಕ್ಷನ್‌ನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದರು. ರಾಮಕುಂಜ ಗ್ರಾ.ಪಂ.ಸದಸ್ಯ ಯತೀಶ್ ಬಾನಡ್ಕ, ಕಾರ್ಯಕರ್ತರಾದ ಫಾರೂಕ್ ಅಮೈ, ಕರುಣಾಕರ ದೊಡ್ಡ ಉರ್ಕ, ರಝಾಕ್ ಕುಂಡಾಜೆ, ರಝಾಕ್ ಸುಪರ್, ಮಹಮ್ಮದ್ ರಫೀಕ್ ಗಂಡಿಬಾಗಿಲು, ಸಿದ್ಧೀಕ್ ಎಸ್.ಕೆ., ಸುನೀತ್‌ರಾಜ್ ಶೆಟ್ಟಿ, ಲತೀಫ್ ಅಮೈ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here