ಬಿಜೆಪಿ ನಾಯಕರಿಬ್ಬರಿಗೆ ಶ್ರದ್ಧಾಂಜಲಿ ಬ್ಯಾನರ್ – ಪುತ್ತೂರು ಬಸ್ ನಿಲ್ದಾಣದ ಬಳಿ ಪ್ರತ್ಯಕ್ಷ !

0

ಸ್ವಲ್ಪ ಹೊತ್ತಿನಲ್ಲೇ ನಗರಸಭೆಯಿಂದ ತೆರವು

ಪುತ್ತೂರು: “ಬಿಜೆಪಿ ಹೀನಾಯವಾಗಿ ಸೋಲಲು ಕಾರಣಕರ್ತರಾದ ನಿಮಗೆ ಭಾವಪೂರ್ಣ ಶ್ರದ್ದಾಂಜಲಿ” ನೊಂದ ಹಿಂದು ಕಾರ್ಯಕರ್ತರೆಂಬ ಚಪ್ಪಲಿ ಹಾರ ಹಾಕಲಾಗಿರುವ ಬ್ಯಾನರ್ ವೊಂದು ಪುತ್ತೂರು ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಬಳಿ ಇರುವ ಅರಣ್ಯ ಇಲಾಖೆಯ ಆವರಣಗೋಡೆಯ ಎದುರು ಕಂಡು ಬಂದಿರುವ ಘಟನೆ ಮೇ 15 ರ ಬೆಳಗ್ಗಿನ ಜಾವ ಬೆಳಕಿಗೆ ಬಂದಿದೆ. ವಿಷಯ ತಿಳಿದ ತಕ್ಷಣ ನಗರಸಭೆಯಿಂದ ಬ್ಯಾನರ್ ತೆರವು ಕಾರ್ಯ ನಡೆದಿದೆ.


ಬಿಜೆಪಿ ರಾಜ್ಯಾಧ್ಯಕ್ಷರಾಗಿರುವ ಸಂಸದ ನಳಿನ್ ಕುಮಾರ್ ಕಟೀಲ್ ಮತ್ತು ಕೇಂದ್ರದ ಮಾಜಿ ಸಚಿವ ಮತ್ತು ಬೆಂಗಳೂರು ಉತ್ತರದ ಹಾಲಿ ಸಂಸದ ಡಿ.ವಿ.ಸದಾನಂದ ಗೌಡರ ಭಾವಚಿತ್ರಗಳನ್ನು ಅಕ್ಕಪಕ್ಕದಲ್ಲಿ ಅಳವಡಿಸಿ, ಅದರ ನಡುವೆ “ಬಿಜೆಪಿ ಹೀನಾಯವಾಗಿ ಸೋಲಲು ಕಾರಣಕರ್ತರಾದ ನಿಮಗೆ ಭಾವಪೂರ್ಣ ಶ್ರದ್ದಾಂಜಲಿ” ನೊಂದ ಹಿಂದು ಕಾರ್ಯಕರ್ತರೆಂದು ಬರೆದಿರುವ ಮತ್ತು ಬ್ಯಾನರ್‌ಗೆ ಚಪ್ಪಲಿ ಹಾರ ಹಾಕಿ ಯಾರೋ ಅಪರಿಚಿತರು ತಮ್ಮ ಆಕ್ರೋಶ ವ್ಯಕ್ತಪಡಿಸಿದಂತೆ ಕಂಡು ಬಂದಿದೆ. ಇದು ಬಿಜೆಪಿಯ ಕಾರ್ಯಕರ್ತರೇ, ನೊಂದ ಹಿಂದು ಕಾರ್ಯಕರ್ತರೇ ಅಥವಾ ಕಿಡಿಗೇಡಿಗಳ ಕೃತ್ಯವೇ ಎಂಬುದನ್ನು ಪೊಲೀಸರು ತನಿಖೆಯಿಂದ ಇನ್ನಷ್ಟೆ ತಿಳಿದು ಬರಬೇಕಾಗಿದೆ. ಸದ್ಯಕ್ಕಂತು ಬ್ಯಾನರ್ ಅನ್ನು ನಗರಸಭೆಯಿಂದ ತೆರವು ಮಾಡಲಾಗಿದೆ.

LEAVE A REPLY

Please enter your comment!
Please enter your name here