ಶಾಂತಿಯುತ ಚುನಾವಣೆ, ಮತ ಎಣಿಕೆ ಪ್ರಕ್ರಿಯೆಗೆ ಸಹಕರಿಸಿದವರಿಗೆ ಡಿಸಿ ಕೃತಜ್ಞತೆ

0

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ 8 ವಿಧಾನಸಭಾ ಕ್ಷೇತ್ರಗಳಲ್ಲಿ ಶಾಂತಿಯುತ ಮತದಾನ, ಚುನಾವಣಾ ಪ್ರಕ್ರಿಯೆ ಹಾಗೂ ಮತ ಎಣಿಕೆಗೆ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸುವುದಾಗಿ ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್ ತಿಳಿಸಿದರು.

ಮೇ 13ರಂದು ಬೆಳಿಗ್ಗೆ 8 ಗಂಟೆಯಿಂದ ಅಪರಾಹ್ನ 2 ಗಂಟೆಯವರೆಗೆ ನಡೆದ ಜಿಲ್ಲೆಯ ಎಂಟು ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಶಾಂತಿಯುತವಾಗಿ ನಡೆದಿದೆ. 6 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು, 2 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಜಯಗಳಿಸಿದ್ದಾರೆ. ವಿಜೇತರಿಗೆ ಅಭಿನಂದನೆಗಳು. ಈ ಚುನಾವಣೆಯ ಮತ ಎಣಿಕೆಗೆ ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಸಹಕಾರ ನೀಡಿದ ಎಲ್ಲಾ ಅಧಿಕಾರಿಗಳು, ವಿವಿಧ ಪಕ್ಷಗಳ ಅಭ್ಯರ್ಥಿಗಳು, ಏಜೆಂಟರು, ಶಾಂತಿ ಸುವ್ಯವಸ್ಥೆಗೆ ಹಗಲು ರಾತ್ರಿ ಜಿಲ್ಲಾಡಳಿತದ ಜೊತೆ ಸಹಕಾರ ನೀಡಿದ ಮಂಗಳೂರು ಪೊಲೀಸ್ ಕಮೀಷನರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಅವರ ತಂಡ ಹಾಗೂ ಚುನಾವಣಾ ಕರ್ತವ್ಯದಲ್ಲಿ ನನ್ನ ಜೊತೆ ಸಹಕಾರ ನೀಡಿದ ಜಿಲ್ಲೆಯ ಹೊರ ಜಿಲ್ಲೆಯ ಅಧಿಕಾರಿಗಳಿಗೆ, ಕಾನೂನು ಸುವ್ಯವಸ್ಥೆ ಕಾಪಾಡಲು ಸಹಕಾರ ನೀಡಿದ ಜಿಲ್ಲೆಯ ಜನತೆಗೆ ಕೃತಜ್ಞತೆ ಸಲ್ಲಿಸುವುದಾಗಿ ರವಿಕುಮಾರ್ ಎಂ.ಆರ್. ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here