ಚಿಂತನಗಾಥ ವಿಮರ್ಶಾ ಲೇಖನ ಸ್ಪರ್ಧೆಯಲ್ಲಿ ಚಾರ್ವಾಕ ಸಿ.ಎ ಬ್ಯಾಂಕ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಅಶೋಕ್ ಗೌಡರಿಗೆ ಪ್ರೋತ್ಸಾಹಕ ಬಹುಮಾನ

0

ಕಾಣಿಯೂರು: ದ. ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ತಾಲೂಕು ಘಟಕ, ಶ್ರೀರಾಮ ಸೌಧ ದರ್ಬೆ ಪುತ್ತೂರು ಇದರ ವತಿಯಿಂದ ಪುತ್ತೂರು ಬಪ್ಪಳಿಗೆ ಅಂಬಿಕಾ ಪದವಿ ಪೂರ್ವ ವಿದ್ಯಾಲಯದಲ್ಲಿ ನಡೆದ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ದತ್ತಿನಿಧಿ 2015 ಕಾರ್ಯಕ್ರಮ, 21ನೇಯ ಕನ್ನಡ ಸಾಹಿತ್ಯ ಸಮ್ಮೇಳನದ ಸ್ಮರಣ ಸಂಚಿಕೆ ಬಿಡುಗಡೆ, ವಿ. ಬಿ. ಆರ್ತಿಕಜೆ ಅವರ ಚಿಂತನಗಾಥ ವಿಮರ್ಶಾ ಲೇಖನದ ಬಹುಮಾನ ವಿತರಣಾ ಕಾರ್ಯಕ್ರಮ ಮೇ 15ರಂದು ನಡೆಯಿತು.

ವಿ. ಬಿ. ಆರ್ತಿಕಜೆ ಅವರು ಸುದ್ದಿ ಬಿಡುಗಡೆ ಪತ್ರಿಕೆಯಲ್ಲಿ ಪ್ರಕಟಗೊಂಡಿರುವ ಚಿಂತನಗಾಥ ವಿಮರ್ಶಾ ಲೇಖನ ಸ್ಪರ್ಧೆಯಲ್ಲಿ ಚಾರ್ವಾಕ ಪ್ರಾಥಮಿಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಅಶೋಕ್ ಗೌಡರಿಗೆ ಪ್ರೋತ್ಸಾಹಕ ಬಹುಮಾನ ನೀಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ದ. ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಡಾ. ಎಂ. ಪಿ ಶ್ರೀನಾಥ್, ಹಿರಿಯ ಸಾಹಿತಿ ವಿ. ಬಿ. ಆರ್ತಿಕಜೆ, ಪುತ್ತೂರು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ, ಬೆಟ್ಟಂಪಾಡಿ ಸ. ಪ್ರ. ದ. ಕಾಲೇಜಿನ ಪ್ರಾಂಶುಪಾಲರಾದ ಡಾ. ವರದರಾಜ ಚಂದ್ರಗಿರಿ, 21ನೇಯ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಡಾ. ಶ್ರೀಧರ ಎಚ್. ಜಿ, ದ. ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಸ್ಮರಣ ಸಂಚಿಕೆಯ ಪ್ರಧಾನ ಸಂಪಾದಕ ಬಿ. ಐತಪ್ಪ ನಾಯ್ಕ್, ಸುದ್ದಿ ಸಮೂಹ ಸಂಸ್ಥೆಯ ಡಾ. ಯು. ಪಿ. ಶಿವಾನಂದ, ಪುತ್ತೂರು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಉಮೇಶ್ ನಾಯಕ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here